ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 04:32 pm
HK News Staffer
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm