ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm