ಬ್ರೇಕಿಂಗ್ ನ್ಯೂಸ್
05-09-25 08:36 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಎಟಿಎಂ ಹೊಕ್ಕ ಕಳ್ಳನೊಬ್ಬ ಅದರ ಕ್ಯಾಶ್ ಬಾಕ್ಸ್ ಒಡೆದು ಹಣ ದೋಚಲು ಯತ್ನಿಸುತ್ತಿದ್ದಾಗಲೇ ದೆಹಲಿಯಿಂದ ಬಂದ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಅಲರ್ಟ್ ಆಗಿ ಆರೋಪಿಯನ್ನು ಬಂಧಿಸಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಕೋಟೆಕಾರು ಬೀರಿಯ ಎಸ್ ಬಿಐ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ಘಟನೆ ನಡೆದಿದ್ದು ಆರೋಪಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾಗಪ್ಪ ಕೆರಳಟ್ಟಿ (41) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ನಸುಕಿನ 2.30ರ ವೇಳೆಗೆ ಆರೋಪಿ ಎಟಿಎಂ ಒಳಹೊಕ್ಕಿದ್ದು ಕ್ಯಾಶ್ ಬಾಕ್ಸ್ ಓಪನ್ ಮಾಡಲು ಯತ್ನಿಸಿದ್ದಾನೆ. ಕೈಯಲ್ಲಿದ್ದ ಆಯುಧ ಬಳಸಿ ಬಾಕ್ಸ್ ಓಪನ್ ಮಾಡಲು ನೋಡುತ್ತಿದ್ದಾಗ ಅಲರ್ಟ್ ಮೆಸೇಜ್ ಹೋಗಿತ್ತು.
ದೇಶಾದ್ಯಂತ ಎಟಿಎಂ ಕೇಂದ್ರಗಳ ಬಗ್ಗೆ ನಿಗಾ ಇಡುವ ದೆಹಲಿ ಕೇಂದ್ರಕ್ಕೆ ಮೆಸೇಜ್ ಬಂದಿದ್ದನ್ನು ಆಧರಿಸಿ ಅಲ್ಲಿನ ಸಿಬಂದಿ ರಂಜಿತ್, ಕೋಟೆಕಾರಿನ ಎಟಿಎಂ ನೋಡಿಕೊಳ್ಳುವ ದೀಪಕ್ ಅಮೀನ್ ಅವರಿಗೆ ಮಾಹಿತಿ ನೀಡಿದ್ದರು. ಇದರಂತೆ, ದೀಪಕ್ ಕೂಡಲೇ 112 ಸಂಖ್ಯೆಗೆ ದೂರು ರವಾನಿಸಿದ್ದರು. ದೂರು ಆಧರಿಸಿ ಉಳ್ಳಾಲ ಪೊಲೀಸರು ಅಲರ್ಟ್ ಆಗಿದ್ದು ಸ್ಥಳಕ್ಕೆ ಧಾವಿಸಿ ಕೋಟೆಕಾರು ಎಟಿಎಂ ಒಳಗಡೆ ಕ್ಯಾಶ್ ಬಾಕ್ಸ್ ಒಡೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ.
ಎಟಿಎಂ ಕೇಂದ್ರದಿಂದ ಬಂದ ಮಾಹಿತಿ ಆಧರಿಸಿ ಸಿಬಂದಿ ಮತ್ತು ಪೊಲೀಸರು ಸಕಾಲಿಕವಾಗಿ ಎಚ್ಚತ್ತಿದ್ದರಿಂದ ಎಟಿಎಂನಿಂದ ಹಣ ಕಳವು ಮಾಡುವ ಪ್ರಯತ್ನ ವಿಫಲಗೊಂಡಿದೆ.
An attempted ATM robbery in Kotekar was foiled in the early hours of Thursday after a real-time alert from Delhi prompted Ullal Police to act swiftly and arrest the accused. The incident occurred at the SBI ATM center in Beeri, Kotekar, where the accused, Nagappa Keralatti (41), a native of Kushtagi taluk in Koppal district, was caught red-handed while trying to break open the cash box inside the ATM.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am