ಬ್ರೇಕಿಂಗ್ ನ್ಯೂಸ್
05-09-25 08:36 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಎಟಿಎಂ ಹೊಕ್ಕ ಕಳ್ಳನೊಬ್ಬ ಅದರ ಕ್ಯಾಶ್ ಬಾಕ್ಸ್ ಒಡೆದು ಹಣ ದೋಚಲು ಯತ್ನಿಸುತ್ತಿದ್ದಾಗಲೇ ದೆಹಲಿಯಿಂದ ಬಂದ ಮಾಹಿತಿ ಮೇರೆಗೆ ಉಳ್ಳಾಲ ಪೊಲೀಸರು ಅಲರ್ಟ್ ಆಗಿ ಆರೋಪಿಯನ್ನು ಬಂಧಿಸಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಕೋಟೆಕಾರು ಬೀರಿಯ ಎಸ್ ಬಿಐ ಬ್ಯಾಂಕಿನ ಎಟಿಎಂ ಕೇಂದ್ರದಲ್ಲಿ ಘಟನೆ ನಡೆದಿದ್ದು ಆರೋಪಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಾಗಪ್ಪ ಕೆರಳಟ್ಟಿ (41) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ನಸುಕಿನ 2.30ರ ವೇಳೆಗೆ ಆರೋಪಿ ಎಟಿಎಂ ಒಳಹೊಕ್ಕಿದ್ದು ಕ್ಯಾಶ್ ಬಾಕ್ಸ್ ಓಪನ್ ಮಾಡಲು ಯತ್ನಿಸಿದ್ದಾನೆ. ಕೈಯಲ್ಲಿದ್ದ ಆಯುಧ ಬಳಸಿ ಬಾಕ್ಸ್ ಓಪನ್ ಮಾಡಲು ನೋಡುತ್ತಿದ್ದಾಗ ಅಲರ್ಟ್ ಮೆಸೇಜ್ ಹೋಗಿತ್ತು.
ದೇಶಾದ್ಯಂತ ಎಟಿಎಂ ಕೇಂದ್ರಗಳ ಬಗ್ಗೆ ನಿಗಾ ಇಡುವ ದೆಹಲಿ ಕೇಂದ್ರಕ್ಕೆ ಮೆಸೇಜ್ ಬಂದಿದ್ದನ್ನು ಆಧರಿಸಿ ಅಲ್ಲಿನ ಸಿಬಂದಿ ರಂಜಿತ್, ಕೋಟೆಕಾರಿನ ಎಟಿಎಂ ನೋಡಿಕೊಳ್ಳುವ ದೀಪಕ್ ಅಮೀನ್ ಅವರಿಗೆ ಮಾಹಿತಿ ನೀಡಿದ್ದರು. ಇದರಂತೆ, ದೀಪಕ್ ಕೂಡಲೇ 112 ಸಂಖ್ಯೆಗೆ ದೂರು ರವಾನಿಸಿದ್ದರು. ದೂರು ಆಧರಿಸಿ ಉಳ್ಳಾಲ ಪೊಲೀಸರು ಅಲರ್ಟ್ ಆಗಿದ್ದು ಸ್ಥಳಕ್ಕೆ ಧಾವಿಸಿ ಕೋಟೆಕಾರು ಎಟಿಎಂ ಒಳಗಡೆ ಕ್ಯಾಶ್ ಬಾಕ್ಸ್ ಒಡೆಯಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಿದ್ದಾರೆ.
ಎಟಿಎಂ ಕೇಂದ್ರದಿಂದ ಬಂದ ಮಾಹಿತಿ ಆಧರಿಸಿ ಸಿಬಂದಿ ಮತ್ತು ಪೊಲೀಸರು ಸಕಾಲಿಕವಾಗಿ ಎಚ್ಚತ್ತಿದ್ದರಿಂದ ಎಟಿಎಂನಿಂದ ಹಣ ಕಳವು ಮಾಡುವ ಪ್ರಯತ್ನ ವಿಫಲಗೊಂಡಿದೆ.
An attempted ATM robbery in Kotekar was foiled in the early hours of Thursday after a real-time alert from Delhi prompted Ullal Police to act swiftly and arrest the accused. The incident occurred at the SBI ATM center in Beeri, Kotekar, where the accused, Nagappa Keralatti (41), a native of Kushtagi taluk in Koppal district, was caught red-handed while trying to break open the cash box inside the ATM.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm