ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm