ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
06-09-25 01:58 pm
Udupi Correspondent
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am
Mangalore Cow Slaughter, Crime, Arrest: ಪೆರ್ನ...
05-09-25 10:53 pm
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm