ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm