ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm