ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm