ಬ್ರೇಕಿಂಗ್ ನ್ಯೂಸ್
26-12-20 12:17 pm Mangalore Correspondent ಕ್ರೈಂ
ವಿಟ್ಲ, ಡಿ.26: ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದ್ದ ದರೋಡೆ ಕೃತ್ಯದ ಮಾದರಿಯಲ್ಲೇ ವಿಟ್ಲದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಒಂಟಿ ಮಹಿಳೆ ಮನೆಯಲ್ಲಿದ್ದಾಗ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯನ್ನು ಕಟ್ಟಿಹಾಕಿ, ಹಲ್ಲೆ ನಡೆಸಿ ಆಕೆಯ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ.
ವಿಟ್ಲದ ಕಾನತ್ತಡ್ಕ ಜುಮಾ ಮಸೀದಿ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಘಟನೆ ನಡೆದಿದೆ. ಆಟೋ ಚಾಲಕನಾಗಿರುವ ರಫೀಕ್, ಶುಕ್ರವಾರ ಮಧ್ಯಾಹ್ನ ಹತ್ತು ವರ್ಷದ ಮಗನೊಂದಿಗೆ ಮಸೀದಿಗೆ ತೆರಳಿದ್ದರು. ಈ ವೇಳೆ, ಪತ್ನಿ ಜೈನಾಬ ಒಬ್ಬರೇ ಇದ್ದು ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಕಟ್ಟಿ ಹಾಕಿದ್ದಾನೆ. ಬಳಿಕ ಆಕೆಯ ದೇಹದಲ್ಲಿದ್ದ ಉಂಗುರ, ಕಿವಿಯೋಲೆ, ಚೈನ್ ಅನ್ನು ಕಿತ್ತುಕೊಂಡಿದ್ದಾನೆ. ಮನೆಯ ಕಪಾಟು ಜಾಲಾಡಿದ್ದು, ಅದರಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ.
ಪತಿ ಮಸೀದಿಯಿಂದ ಬಂದಾಗ ಮುಂಬಾಗಿಲು ಮುಚ್ಚಿಕೊಂಡಿತ್ತು. ಹಿಂಬಾಗಿಲು ತೆರೆದಿದ್ದು ಅಲ್ಲಿಂದ ಒಳ ಹೋದಾಗ ಪತ್ನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದರ ಸುತ್ತಮುತ್ತಲಲ್ಲಿ ಹಲವು ಮನೆಗಳಿದ್ದು ದರೋಡೆ ಕೃತ್ಯ ಯಾರ ಗಮನಕ್ಕೂ ಬರಲಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
A gang of robbers broke into a house in Kanathadka, Vittal here on Friday December 25 and robbed gold ornaments after tying up and assaulting a woman occupant.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm