ಬ್ರೇಕಿಂಗ್ ನ್ಯೂಸ್
08-09-25 10:34 pm Mangalore Correspondent ಕ್ರೈಂ
ಮಂಗಳೂರು, ಸೆ.8 : 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾಗಿ ಆಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
1998 ರ ಡಿಸೆಂಬರ್ 31ರಂದು ಮುಲ್ಕಿ ಠಾಣಾ ಸರಹದ್ದಿನ ಹಳೆಯಂಗಡಿಯಲ್ಲಿ ನಡೆದ ಕೋಮುಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆ ಅ. ಕ್ರ.𝟬𝟲/𝟭𝟵𝟵𝟵 ಕಲಂ 143, 147, 148, 436, 427 r/w 149 IPC ಪ್ರಕರಣದಲ್ಲಿ ಆರೋಪಿಗಳ ಪೈಕಿ ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಎಂಬವರು ಘಟನೆ ನಡೆದಾಗಿನಿಂದ ಪೊಲೀಸರಿಗೆ ಸಿಗದೇ ಪರಾರಿಯಾಗಿದ್ದರು. ಆಗಿನ ಮುಲ್ಕಿ ಠಾಣೆಯ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯದ ವಿಚಾರಣೆಗೂ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ ಮೂಡುಬಿದ್ರೆ ಹಿರಿಯ CJ & JMFC ನ್ಯಾಯಾಲಯ CC. No 665/2014, LPC No 10/2017 ಪ್ರಕರಣವೆಂದು ಘೋಷಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 𝟮𝟲 ವರ್ಷಗಳಿಂದ ತಲೆಮರೆಸಿಕೊಂಡಿರುವ LPC warrant ಆಸಾಮಿ ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಲೀಲಾಧರ್ (52) ಎಂಬವನನ್ನು ಇತ್ತೀಚೆಗೆ ಸ್ವದೇಶಕ್ಕೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ.
ಅದೇರೀತಿ ಇತ್ತೀಚೆಗೆ ಇದೇ ಪ್ರಕರಣದ ಇನ್ನೊಬ್ಬ ಆರೋಪಿ ಪಡು ಪಣಂಬೂರು ನಿವಾಸಿ ಚಂದ್ರಹಾಸ್ ಕೇಶವ ಶೆಟ್ಟಿ (59) ಎಂಬಾತನನ್ನು ಸಹ ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿರುತ್ತಾರೆ.
ನ್ಯಾಯಾಲಯದಿಂದ ಹೊರಡಿಸಿದ್ದ ಉದ್ಘೋಷನೆ ಆದೇಶ ಉಲ್ಲಂಘಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ಇವರ ಇಬ್ಬರ ವಿರುದ್ದ ಪ್ರತ್ಯೇಕವಾಗಿ 88/2025 ಮತ್ತು 94/2025 ಕಲಂ 208, 209 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
In a significant breakthrough, Mangaluru police have arrested two long-time absconding accused in a 1998 communal riot case that took place in Mulki, nearly 26 years ago. The arrests were made after the accused reentered the country and were traced through local intelligence.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am