ಬ್ರೇಕಿಂಗ್ ನ್ಯೂಸ್
12-09-25 11:07 pm Mangalore Correspondent ಕ್ರೈಂ
ಮಂಗಳೂರು, ಸೆ.12 : ಅಪ್ರಾಪ್ತ ಬಾಲಕಿ ಮನೆಯಲ್ಲಿ ಒಬ್ಬಂಟಿ ಇದ್ದಾಗ ಮನೆಗೆ ನುಗ್ಗಿ ಆಕೆಗೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದ ಪ್ರಕರಣ ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಫ್ಸಿ-೨ (ಪೋಕ್ಸೊ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (೫೮) ಶಿಕ್ಷೆಗೊಳಗಾದ ಅಪರಾಧಿ.
ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳಾಗಿದ್ದು, ಕೋಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಬಾಲಕಿಯ ತಾಯಿ ಮಗಳನ್ನು ತನ್ನ ಸೋದರ ಸಂಬಂಧಿ ಮನೆಯಲ್ಲಿ ಬಿಟ್ಟು ಕೊಣಾಜೆ ವಸತಿ ಶಾಲೆಗೆ ಬಿಟ್ಟು ಬರುವಂತೆ ಹೇಳಿ ಊರಿಗೆ ತೆರಳಿದ್ದರು. 2024ರ ಆ.6ರಂದು ಬೆಳಗ್ಗೆ ಪಿರ್ಯಾದಿದಾರರು (ಬಾಲಕಿಯ ಮಾವ) ಗಾರೆ ಕೆಲಸಕ್ಕೆ ಹೊರಟು ಹೋಗಿದ್ದರೆ ಅವರ ಹೆಂಡತಿ ಊರಿಗೆ ಹೋಗಿದ್ದರು. ಬಾಲಕಿ ಒಬ್ಬಳೇ ಮನೆಯಲ್ಲಿದ್ದು, ಈ ಸಂದರ್ಭ ಪಕ್ಕದ ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿ ಫಕೀರಪ್ಪ ಬಾಲಕಿ ಇದ್ದ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಬಾಲಕಿ ವಿರೋಧಿಸಿದಾಗ ಹಲ್ಲೆಗೈದು ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗುತ್ತಾನೆ.
ಅಪ್ರಾಪ್ತ ಬಾಲಕಿಯ ಕೊಲೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪಿ ಮೇಲಿನ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗೆ ಬಿಎನ್ಎಸ್ ೧೦೩(೧) ಕೊಲೆ ಪ್ರಕರಣಕ್ಕೆ ಮರಣದಂಡನೆ ಶಿಕ್ಷೆ, ಪೊಕ್ಸೋ ೪(೨)ರಡಿ ಪೋಕ್ಸೋ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ಮತ್ತು ೫೦ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ, ಬಿಎನ್ಎಸ್ ೩೩೨(ಎ) ಅಕ್ರಮ ಪ್ರವೇಶ ಅಪರಾಧದಡಿ ಜೀವಾವಧಿ ಶಿಕ್ಷೆ ಮತ್ತು ೫ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
5 ಲಕ್ಷ ರೂ. ಪರಿಹಾರ ನೀಡಲು ಅದೇಶ
ಬಾಲಕಿಯ ತಂದೆ-ತಾಯಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದೆ. ಪಣಂಬೂರು ಠಾಣಾ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದರು. ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಸರಕಾರದ ಪರವಾಗಿ ವಾದಿಸಿದ್ದರು.
ಅಪ್ರಾಪ್ತ ಬಾಲಕಿ ಕೊಲೆಗೆ ಮುನ್ನಾ ದಿನ ನೆರೆಮನೆಯ ಮಹಿಳೆಯೊಬ್ಬರ ಫೋನ್ ಮೂಲಕ ತನ್ನ ತಾಯಿಗೆ ಕರೆ ಮಾಡಿ ಜ್ವರವಿರುವ ಬಗ್ಗೆ ಹೇಳಿದ್ದಳು. ಮರುದಿನ ತಾಯಿ ಕರೆ ಮಾಡಿ, ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಮಹಿಳೆ ಬಾಲಕಿ ಇರುವ ಮನೆಗೆ ಬಂದಾಗ ಆರೋಪಿ ಫಕೀರಪ್ಪ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ್ದು ಕಂಡಿತ್ತು. ಇದನ್ನು ನೋಡಿ ಮಹಿಳೆಯರು ಆತಂಕಿತರಾಗಿದ್ದು, ಆರೋಪಿ ಈ ವಿಷಯ ಯಾರಿಗೂ ಹೇಳದಂತೆ ಮಹಿಳೆಯರಿಗೆ ಬೆದರಿಸಿ ಅಲ್ಲಿಂದ ತೆರಳಿದ್ದ. ಕೋರ್ಟ್ ವಿಚಾರಣೆ ವೇಳೆ ಇಬ್ಬರು ಮಹಿಳೆಯರು ಘಟನೆಯ ಪ್ರತ್ಯಕ್ಷ ಸಾಕ್ಷಿ ಹೇಳಿದ್ದು ಪ್ರಮುಖವಾಗಿತ್ತು. ಉಳಿದಂತೆ ಆರೋಪಿ ಬಟ್ಟೆಯಲ್ಲಿದ್ದ ರಕ್ತ ಹಾಗೂ ಬಾಲಕಿ ರಕ್ತದ ಸ್ಯಾಂಪಲ್ ಹೋಲಿಕೆಯಾಗಿದೆ. ಬಾಲಕಿಯ ಮುಖದಲ್ಲಿದ್ದ ಗಾಯದ ಗುರುತು ಮತ್ತು ಆರೋಪಿಯ ಹಲ್ಲಿನ ಚಹರೆ ಹೋಲಿಕೆಯಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am