ಬ್ರೇಕಿಂಗ್ ನ್ಯೂಸ್
12-09-25 11:07 pm Mangalore Correspondent ಕ್ರೈಂ
ಮಂಗಳೂರು, ಸೆ.12 : ಅಪ್ರಾಪ್ತ ಬಾಲಕಿ ಮನೆಯಲ್ಲಿ ಒಬ್ಬಂಟಿ ಇದ್ದಾಗ ಮನೆಗೆ ನುಗ್ಗಿ ಆಕೆಗೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆಗೈದ ಪ್ರಕರಣ ದಕ್ಷಿಣ ಕನ್ನಡ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಫ್ಸಿ-೨ (ಪೋಕ್ಸೊ) ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬೆಳಗಾವಿ ಸವದತ್ತಿ ತಾಲೂಕು ಹಂಚಿನಾಳ ಗ್ರಾಮ ನಿವಾಸಿ ಫಕೀರಪ್ಪ ಹಣಮಪ್ಪ ಮಾದರ (೫೮) ಶಿಕ್ಷೆಗೊಳಗಾದ ಅಪರಾಧಿ.
ಅಪ್ರಾಪ್ತ ಬಾಲಕಿ ಬೆಳಗಾವಿ ಮೂಲದವಳಾಗಿದ್ದು, ಕೋಣಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಬಾಲಕಿಯ ತಾಯಿ ಮಗಳನ್ನು ತನ್ನ ಸೋದರ ಸಂಬಂಧಿ ಮನೆಯಲ್ಲಿ ಬಿಟ್ಟು ಕೊಣಾಜೆ ವಸತಿ ಶಾಲೆಗೆ ಬಿಟ್ಟು ಬರುವಂತೆ ಹೇಳಿ ಊರಿಗೆ ತೆರಳಿದ್ದರು. 2024ರ ಆ.6ರಂದು ಬೆಳಗ್ಗೆ ಪಿರ್ಯಾದಿದಾರರು (ಬಾಲಕಿಯ ಮಾವ) ಗಾರೆ ಕೆಲಸಕ್ಕೆ ಹೊರಟು ಹೋಗಿದ್ದರೆ ಅವರ ಹೆಂಡತಿ ಊರಿಗೆ ಹೋಗಿದ್ದರು. ಬಾಲಕಿ ಒಬ್ಬಳೇ ಮನೆಯಲ್ಲಿದ್ದು, ಈ ಸಂದರ್ಭ ಪಕ್ಕದ ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿ ಫಕೀರಪ್ಪ ಬಾಲಕಿ ಇದ್ದ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಬಾಲಕಿ ವಿರೋಧಿಸಿದಾಗ ಹಲ್ಲೆಗೈದು ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ, ಸ್ಥಳದಿಂದ ಪರಾರಿಯಾಗುತ್ತಾನೆ.
ಅಪ್ರಾಪ್ತ ಬಾಲಕಿಯ ಕೊಲೆಗೆ ಸಂಬಂಧಿಸಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯ ನ್ಯಾಯಾಧೀಶ ಕೆ.ಎಸ್.ಮಾನು ಅವರು ಆರೋಪಿ ಮೇಲಿನ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಅಪರಾಧಿಗೆ ಬಿಎನ್ಎಸ್ ೧೦೩(೧) ಕೊಲೆ ಪ್ರಕರಣಕ್ಕೆ ಮರಣದಂಡನೆ ಶಿಕ್ಷೆ, ಪೊಕ್ಸೋ ೪(೨)ರಡಿ ಪೋಕ್ಸೋ ಪ್ರಕರಣಕ್ಕೆ ಜೀವಾವಧಿ ಶಿಕ್ಷೆ ಮತ್ತು ೫೦ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ, ಬಿಎನ್ಎಸ್ ೩೩೨(ಎ) ಅಕ್ರಮ ಪ್ರವೇಶ ಅಪರಾಧದಡಿ ಜೀವಾವಧಿ ಶಿಕ್ಷೆ ಮತ್ತು ೫ಸಾವಿರ ರೂ. ದಂಡ, ದಂಡ ತೆರಲು ತಪ್ಪಿದಲ್ಲಿ ೪ ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
5 ಲಕ್ಷ ರೂ. ಪರಿಹಾರ ನೀಡಲು ಅದೇಶ
ಬಾಲಕಿಯ ತಂದೆ-ತಾಯಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶ ನೀಡಿದೆ. ಪಣಂಬೂರು ಠಾಣಾ ಇನ್ಸ್ಪೆಕ್ಟರ್ ಮೊಹಮ್ಮದ್ ಸಲೀಂ ಅಬ್ಬಾಸ್ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಸಿದ್ದರು. ವಿಶೇಷ ಸರಕಾರಿ ಅಭಿಯೋಜಕಿ ಸಹನಾ ದೇವಿ ಬೋಳೂರು ಸರಕಾರದ ಪರವಾಗಿ ವಾದಿಸಿದ್ದರು.
ಅಪ್ರಾಪ್ತ ಬಾಲಕಿ ಕೊಲೆಗೆ ಮುನ್ನಾ ದಿನ ನೆರೆಮನೆಯ ಮಹಿಳೆಯೊಬ್ಬರ ಫೋನ್ ಮೂಲಕ ತನ್ನ ತಾಯಿಗೆ ಕರೆ ಮಾಡಿ ಜ್ವರವಿರುವ ಬಗ್ಗೆ ಹೇಳಿದ್ದಳು. ಮರುದಿನ ತಾಯಿ ಕರೆ ಮಾಡಿ, ಮಗಳಿಗೆ ಫೋನ್ ಕೊಡುವಂತೆ ಹೇಳಿದ್ದರು. ಮಹಿಳೆ ಬಾಲಕಿ ಇರುವ ಮನೆಗೆ ಬಂದಾಗ ಆರೋಪಿ ಫಕೀರಪ್ಪ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ್ದು ಕಂಡಿತ್ತು. ಇದನ್ನು ನೋಡಿ ಮಹಿಳೆಯರು ಆತಂಕಿತರಾಗಿದ್ದು, ಆರೋಪಿ ಈ ವಿಷಯ ಯಾರಿಗೂ ಹೇಳದಂತೆ ಮಹಿಳೆಯರಿಗೆ ಬೆದರಿಸಿ ಅಲ್ಲಿಂದ ತೆರಳಿದ್ದ. ಕೋರ್ಟ್ ವಿಚಾರಣೆ ವೇಳೆ ಇಬ್ಬರು ಮಹಿಳೆಯರು ಘಟನೆಯ ಪ್ರತ್ಯಕ್ಷ ಸಾಕ್ಷಿ ಹೇಳಿದ್ದು ಪ್ರಮುಖವಾಗಿತ್ತು. ಉಳಿದಂತೆ ಆರೋಪಿ ಬಟ್ಟೆಯಲ್ಲಿದ್ದ ರಕ್ತ ಹಾಗೂ ಬಾಲಕಿ ರಕ್ತದ ಸ್ಯಾಂಪಲ್ ಹೋಲಿಕೆಯಾಗಿದೆ. ಬಾಲಕಿಯ ಮುಖದಲ್ಲಿದ್ದ ಗಾಯದ ಗುರುತು ಮತ್ತು ಆರೋಪಿಯ ಹಲ್ಲಿನ ಚಹರೆ ಹೋಲಿಕೆಯಾಗಿದೆ.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm