ಬ್ರೇಕಿಂಗ್ ನ್ಯೂಸ್
17-09-25 12:25 pm Bangalore Correspondent ಕ್ರೈಂ
ಬೆಂಗಳೂರು, ಸೆ 17 : ಫುಡ್ ಡೆಲಿವರಿ ನೆಪದಲ್ಲಿ ಬಂದು ವೃದ್ಧೆ ಕೈ-ಕಾಲು ಕಟ್ಟಿಹಾಕಿ ಮನೆಯಲ್ಲಿ 8 ಲಕ್ಷ ರೂ. ಹಣ ದರೋಡೆ ಮಾಡಿರುವ ಘಟನೆ ಬನಶಂಕರಿಯಲ್ಲಿ ನಡೆದಿದೆ.
ಆರೋಪಿಗಳು ಫುಡ್ ಡೆಲಿವರಿ ಇದೆ ಅಂತಾ ಬಾಗಿಲ ಬೆಲ್ ಮಾಡಿದ್ದಾರೆ. ಡೋರ್ ಓಪನ್ ಮಾಡುತ್ತಿದ್ದಂತೆ ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯನ್ನು ತಳ್ಳಿಕೊಂಡು ಒಳಗಡೆ ನುಗ್ಗಿದ್ದಾರೆ. ವೃದ್ಧೆಗೆ ಚಾಕು ತೋರಿಸಿ, ಕೈ-ಕಾಲು ಕಟ್ಟಿ ಹಾಕಿ ಎಂಟು ಲಕ್ಷ ದರೋಡೆ ಮಾಡಿದ್ದಾರೆ.
ಮನೆ ಡ್ರೈವರ್ ಕೆಲಸದಿಂದ ತೆಗೆದಿದ್ದಕ್ಕೆ ಈ ಕೃತ್ಯ ಎಸಗಿರೋದು ಬೆಳಕಿಗೆ ಬಂದಿದೆ. ವೃದ್ಧೆ ಕನಕಪುಷ್ಪ ಎಂಬವರ ಮಗ ರಾಹುಲ್ ಬಳಿ ಮಡಿವಾಳ ಎಂಬಾತ ನಾಲ್ಕು ತಿಂಗಳಿನಿಂದ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಆತನ ಸಂಬಳ ಕ್ಲಿಯರ್ ಮಾಡಿ ಡ್ರೈವರ್ ಕೆಲಸದಿಂದ ತೆಗೆದು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಮಡಿವಾಳ, ವೃದ್ಧೆಯ ಮಗ ಹೊರಗೆ ಹೋಗೋದನ್ನೆ ಕಾದಿದ್ದ.
ರಾಹುಲ್ ಹೊರಗೆ ಹೋಗ್ತಿದ್ದಂತೆ ತನ್ನ ಮೂವರು ಸ್ನೇಹಿತರೊಂದಿಗೆ ಮನೆ ಬಳಿ ಬಂದಿದ್ದ. ಡೆಲಿವರಿ ಬಾಯ್ ಅಂತಾ ಡೋರ್ ಬೆಲ್ ಮಾಡಿದ್ದಾರೆ. ಮೊದಲಿಗೆ ವೃದ್ಧೆ ಬಾಗಿಲು ತೆರೆಯುವುದಿಲ್ಲ. ನಾವು ಯಾವುದೇ ಆರ್ಡರ್ ಮಾಡಿಲ್ಲ ಅಂತ ಹೇಳುತ್ತಾರೆ. ಈ ವೇಳೆ ನಿಮ್ಮ ಮಗ ರಾಹುಲ್ ಅನ್ನೋರು ಆರ್ಡರ್ ಮಾಡಿದ್ದಾರೆ ಅಂತ ಹೇಳಿದ್ದಾರೆ. ಬಾಗಿಲು ತೆಗೆಯುತ್ತಿದ್ದಂತೆ ಮಡಿವಾಳ ಸೇರಿ ನಾಲ್ವರು ಮನೆ ಒಳಗೆ ನುಗ್ಗಿದ್ದಾರೆ. ವೃದ್ಧೆ ಕನಕಪುಷ್ಪ ಕೈ-ಕಾಲು ಕಟ್ಟಿ ಕುತ್ತಿಗೆಗೆ ಚಾಕು ಇರಿದಿದ್ದಾರೆ. ನಂತರ ಎಂಟು ಲಕ್ಷ ಹಣ ದೋಚಿ ಪರಾರಿಯಾಗಿದ್ದಾರೆ.
ಸದ್ಯ ವೃದ್ಧೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident in Banashankari, Bengaluru, an elderly woman was tied up and robbed of rs 8 lakh by her former driver and his accomplices, who posed as food delivery agents to gain entry into her house.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm