ಬ್ರೇಕಿಂಗ್ ನ್ಯೂಸ್
20-09-25 05:11 pm Mangalore Correspondent ಕ್ರೈಂ
ಮಂಗಳೂರು, ಸೆ.20 : ಇತ್ತೀಚೆಗೆ ಬಂಟ್ವಾಳ ತಾಲೂಕಿನ ತುಂಬೆ ಮತ್ತು ಉಪ್ಪಿನಂಗಡಿಯ ಪೆರ್ನೆಯಲ್ಲಿ ಹಟ್ಟಿಯಿಂದ ದನಗಳನ್ನು ಕದ್ದೊಯ್ದು ಮಾಂಸ ಮಾರಾಟ ಮಾಡಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬಂಟ್ವಾಳ ತುಂಬೆ ಬಳಿ ಮನೆಯ ಹಟ್ಟಿಯಿಂದ ಗೋವನ್ನು ಕದ್ದು ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಆ.15ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಕೃತ್ಯದಲ್ಲಿ ಭಾಗಿಯಾಗಿದ್ದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂಬವರನ್ನು ಸೆ.5ರಂದು ದಸ್ತಗಿರಿ ಮಾಡಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಇದೇ ಆರೋಪಿಗಳು ಸೆ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲು ಮನೆಯೊಂದರ ಹಟ್ಟಿಯಿಂದ ಸಾಕು ದನವನ್ನು ಕದ್ದು ಅಲ್ಲಿಯೇ ಪಕ್ಕದ ತೋಟದಲ್ಲಿ ಮಾಂಸಗೈದ ಬಗ್ಗೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು. ತನಿಖೆ ಸಂದರ್ಭದಲ್ಲಿ ಎರಡೂ ಕೃತ್ಯಗಳನ್ನು ಒಂದೇ ತಂಡ ನಡೆಸಿರುವುದು ಕಂಡುಬಂದಿತ್ತು. ಎರಡಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದ್ದರೆ ಅಂಥವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಬಹುದಾಗಿದೆ.
ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಸಲುವಾಗಿ ದ.ಕ. ಎಸ್ಪಿ ಅರುಣ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
Police have invoked the Karnataka Control of Organised Crimes Act (KCOCA) against individuals accused in recent cases of cattle theft and illegal slaughter in Tumbe and Uppinangady areas of Bantwal taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am