ಬ್ರೇಕಿಂಗ್ ನ್ಯೂಸ್
21-09-25 02:30 pm Bangalore Correspondent ಕ್ರೈಂ
ಬೆಂಗಳೂರು, ಸೆ.21: ಐಎಎಸ್ ಅಧಿಕಾರಿ ಮಣಿವಣ್ಣನ್ಅವರಿಗೂ ಸೈಬರ್ ವಂಚಕರ ಕಾಟ ಎದುರಾಗಿದೆ. ಮಣಿವಣ್ಣನ್ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆರೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಆಪ್ತರನ್ನೇ ವಂಚಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ. ಮಣಿವಣ್ಣನ್ಗೆ ನಕಲಿ ಫೇಸ್ಬುಕ್ ಅಕೌಂಟ್ ಕಾಟ ಶುರುವಾಗಿದೆ. ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸೈಬರ್ ವಂಚನೆ ಮಾಡಲಾಗುತ್ತಿದೆ. ಒಂದಲ್ಲ, ಎರಡಲ್ಲ ,ನಾಲ್ಕಕ್ಕೂ ಹೆಚ್ಚು ನಕಲಿ ಖಾತೆಯನ್ನು ಈ ವಂಚಕರು ತೆರೆದಿದ್ದಾರೆ. ಎಲ್ಲಾ ಖಾತೆಗಳಲ್ಲಿಯೂ ಮಣಿವಣ್ಣನ್ ಅವರ ಹೆಸರು, ಫೂಟೋ ಬಳಸಲಾಗಿದೆ.
ಈ ಖಾತೆಗಳಿಂದ ಮಣಿವಣ್ಣನ್ ಹೆಸರಿನಲ್ಲಿ ಅವರ ಆಪ್ತರಿಗೆ , ಸ್ನೇಹಿತರಿಗೆ ಮೆಸೇಜ್ ಮಾಡುತ್ತಾರೆ. ನಮ್ಮ ಸ್ನೇಹಿತರು ಸಿ.ಆರ್.ಪಿ.ಎಫ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ವರ್ಗಾವಣೆ ಆಗುತ್ತಿದೆ. ಹೀಗಾಗಿ ಅವರ ಮನೆಯ ಫರ್ನಿಚರ್ ಮಾರಾಟ ಮಾಡಬೇಕೆಂದಿದ್ದಾರೆ. ನಾನು ಒಮ್ಮೆ ನೋಡಿದ್ದೇನೆ. ನಿಮಗೆ ಬೇಕಾದರೆ ನೀವು ಖರೀದಿಸಬಹುದು ಎಂದು ತರಾವರಿ ಮೆಸೇಜ್ಗಳನ್ನು ಕಳುಹಿಸುತ್ತಾರೆ. ನಿಮ್ಮ ನಂಬರ್ ಕಳುಹಿಸಿ ನನ್ನ ಸ್ನೇಹಿತರೇ ನಿಮಗೆ ಕರೆ ಮಾಡುತ್ತಾರೆ ಎಂದು ಮೆಸೇಜ್ ಬರುತ್ತದೆ. ಹಿರಿಯ ಐಎಎಸ್ ಅಧಿಕಾರಿಯ ಮೆಸೇಜ್ ಎಂದು ನಂಬಿದ ಇಬ್ಬರು ಗೆಳೆಯರು ಮೋಸಕ್ಕೆ ಒಳಗಾಗಿದ್ದಾರೆ. ಕೇಸ್ ದಾಖಲಿಸಿಕೊಂಡ ಸೈಬರ್ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಮಣಿವಣ್ಣನ್ ಎರಡನೇ ಬಾರಿ ಸೈಬರ್ ವಂಚಕರ ದಾಳಿಗೆ ಸಿಲುಕಿದ್ದಾರೆ. 2ನೇ ಪ್ರಕರಣ ಇದಾಗಿದ್ದು, ಮೊದಲನೇ ಪ್ರಕರಣ 9 ತಿಂಗಳ ಹಿಂದೆ ನಡೆದಿತ್ತು. ಆಗಲೂ ಖದೀಮರು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು. ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿತ್ತು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಆಗ ಕೇಸ್ ಆಗುತ್ತಿದ್ದಂತೆ ಅಕೌಂಟ್ ಡಿಆ್ಯಕ್ಟಿವೇಟ್ ಮಾಡಿದ್ದ ವಂಚಕರು ಈಗ ಮತ್ತೆ ಅದೇ ಹಾದಿ ಹಿಡಿದಿದ್ದಾರೆ. ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿ ಮಾಡಿದ್ದಾರೆ.
Senior IAS officer and Social Welfare Department Principal Secretary P. Manivannan has once again fallen prey to cyber fraudsters, who created fake Facebook accounts in his name and duped his close friends by sending fraudulent messages.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am