ಬ್ರೇಕಿಂಗ್ ನ್ಯೂಸ್
21-09-25 02:30 pm Bangalore Correspondent ಕ್ರೈಂ
ಬೆಂಗಳೂರು, ಸೆ.21: ಐಎಎಸ್ ಅಧಿಕಾರಿ ಮಣಿವಣ್ಣನ್ಅವರಿಗೂ ಸೈಬರ್ ವಂಚಕರ ಕಾಟ ಎದುರಾಗಿದೆ. ಮಣಿವಣ್ಣನ್ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ತೆರೆದು, ಫರ್ನಿಚರ್ ಮಾರಾಟದ ಹೆಸರಿನಲ್ಲಿ ಆಪ್ತರನ್ನೇ ವಂಚಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಿ. ಮಣಿವಣ್ಣನ್ಗೆ ನಕಲಿ ಫೇಸ್ಬುಕ್ ಅಕೌಂಟ್ ಕಾಟ ಶುರುವಾಗಿದೆ. ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಸೈಬರ್ ವಂಚನೆ ಮಾಡಲಾಗುತ್ತಿದೆ. ಒಂದಲ್ಲ, ಎರಡಲ್ಲ ,ನಾಲ್ಕಕ್ಕೂ ಹೆಚ್ಚು ನಕಲಿ ಖಾತೆಯನ್ನು ಈ ವಂಚಕರು ತೆರೆದಿದ್ದಾರೆ. ಎಲ್ಲಾ ಖಾತೆಗಳಲ್ಲಿಯೂ ಮಣಿವಣ್ಣನ್ ಅವರ ಹೆಸರು, ಫೂಟೋ ಬಳಸಲಾಗಿದೆ.
ಈ ಖಾತೆಗಳಿಂದ ಮಣಿವಣ್ಣನ್ ಹೆಸರಿನಲ್ಲಿ ಅವರ ಆಪ್ತರಿಗೆ , ಸ್ನೇಹಿತರಿಗೆ ಮೆಸೇಜ್ ಮಾಡುತ್ತಾರೆ. ನಮ್ಮ ಸ್ನೇಹಿತರು ಸಿ.ಆರ್.ಪಿ.ಎಫ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ವರ್ಗಾವಣೆ ಆಗುತ್ತಿದೆ. ಹೀಗಾಗಿ ಅವರ ಮನೆಯ ಫರ್ನಿಚರ್ ಮಾರಾಟ ಮಾಡಬೇಕೆಂದಿದ್ದಾರೆ. ನಾನು ಒಮ್ಮೆ ನೋಡಿದ್ದೇನೆ. ನಿಮಗೆ ಬೇಕಾದರೆ ನೀವು ಖರೀದಿಸಬಹುದು ಎಂದು ತರಾವರಿ ಮೆಸೇಜ್ಗಳನ್ನು ಕಳುಹಿಸುತ್ತಾರೆ. ನಿಮ್ಮ ನಂಬರ್ ಕಳುಹಿಸಿ ನನ್ನ ಸ್ನೇಹಿತರೇ ನಿಮಗೆ ಕರೆ ಮಾಡುತ್ತಾರೆ ಎಂದು ಮೆಸೇಜ್ ಬರುತ್ತದೆ. ಹಿರಿಯ ಐಎಎಸ್ ಅಧಿಕಾರಿಯ ಮೆಸೇಜ್ ಎಂದು ನಂಬಿದ ಇಬ್ಬರು ಗೆಳೆಯರು ಮೋಸಕ್ಕೆ ಒಳಗಾಗಿದ್ದಾರೆ. ಕೇಸ್ ದಾಖಲಿಸಿಕೊಂಡ ಸೈಬರ್ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.
ಕಳೆದ 9 ತಿಂಗಳಿನಲ್ಲಿ ಮಣಿವಣ್ಣನ್ ಎರಡನೇ ಬಾರಿ ಸೈಬರ್ ವಂಚಕರ ದಾಳಿಗೆ ಸಿಲುಕಿದ್ದಾರೆ. 2ನೇ ಪ್ರಕರಣ ಇದಾಗಿದ್ದು, ಮೊದಲನೇ ಪ್ರಕರಣ 9 ತಿಂಗಳ ಹಿಂದೆ ನಡೆದಿತ್ತು. ಆಗಲೂ ಖದೀಮರು ನಕಲಿ ಫೇಸ್ಬುಕ್ ಖಾತೆ ತೆರೆದಿದ್ದರು. ಬೆಂಗಳೂರು ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿತ್ತು. ಆದರೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿರಲಿಲ್ಲ. ಆಗ ಕೇಸ್ ಆಗುತ್ತಿದ್ದಂತೆ ಅಕೌಂಟ್ ಡಿಆ್ಯಕ್ಟಿವೇಟ್ ಮಾಡಿದ್ದ ವಂಚಕರು ಈಗ ಮತ್ತೆ ಅದೇ ಹಾದಿ ಹಿಡಿದಿದ್ದಾರೆ. ಆರೋಪಿಗಳ ಪತ್ತೆ ಮಾಡಿ ಅಕೌಂಟ್ ಡಿಆ್ಯಕ್ಟಿವೇಟ್ ಮಾಡುವಂತೆ ಪೊಲೀಸರಲ್ಲಿ ಮಣಿವಣ್ಣನ್ ಮನವಿ ಮಾಡಿದ್ದಾರೆ.
Senior IAS officer and Social Welfare Department Principal Secretary P. Manivannan has once again fallen prey to cyber fraudsters, who created fake Facebook accounts in his name and duped his close friends by sending fraudulent messages.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm