ಬ್ರೇಕಿಂಗ್ ನ್ಯೂಸ್
22-09-25 08:16 pm Mangalore Correspondent ಕ್ರೈಂ
ಮಂಗಳೂರು, ಸೆ.23 : ಮಂಗಳೂರು ನಗರದಲ್ಲಿ ಕೊಕೇನ್ ಮತ್ತು ಎಂಡಿಎಂಎ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲದ ಬೆನ್ನುಬಿದ್ದ ಸಿಸಿಬಿ ಘಟಕದ ಪೊಲೀಸರು ಒಟ್ಟು ಎರಡು ಪ್ರಕರಣಗಳಿಗೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಾವೂರು ಗಾಂಧಿ ನಗರ ನಿವಾಸಿ ಚಿರಾಗ್ ಸನಿಲ್, ಅಶೋಕನಗರದ ಆಲ್ವಿನ್ ಕ್ಲಿಂಟನ್ ಡಿಸೋಜ, ಕೇರಳದ ಮಲಪ್ಪುರಂ ಮೂಲದ ಅಬ್ದುಲ್ ಕರೀಂ (52), ಕುಲಶೇಖರದ ಜನನ್ @ ಜನನ್ ಜಗನ್ನಾಥ (28), ಬೋಳೂರಿನ ರಾಜೇಶ್ ಬಂಗೇರ @ ರಕ್ಷಿತ್ (30), ದಂಬೆಲ್ ನಿವಾಸಿ ವರುಣ್ ಗಾಣಿಗ (28) ಬಂಧಿತರು.

ಕಾವೂರಿನ ಗಾಂಧಿ ನಗರದ ಮಲ್ಲಿ ಲೇ ಔಟ್ ಎಂಬಲ್ಲಿ ಸೆ.21ರಂದು ಬೆಳಗ್ಗೆ ಸ್ಕೂಟರ್ ನಲ್ಲಿ ಇಬ್ಬರು ಯುವಕರು ಎಂಡಿಎಂಎ ಮಾದಕ ವಸ್ತುವಿನೊಂದಿಗೆ ಪತ್ತೆಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಎಂಡಿಎಂಎ ಡ್ರಗ್ಸ್ ಪತ್ತೆಯಾಗಿದೆ. ಕಾವೂರಿನ ನಿವಾಸಿಗಳಾದ ಚಿರಾಗ್ ಸನಿಲ್ ಮತ್ತು ಆಲ್ವಿನ್ ಕ್ಲಿಂಟನ್ ಡಿಸೋಜ ವಶಕ್ಕೆ ಪಡೆದವರಾಗಿದ್ದು, ಅವರಿಂದ ರೂ. 22,30,000/- ಮೌಲ್ಯದ 111.83 ಗ್ರಾಂ ಎಂಡಿಎಂಎ ವಶಪಡಿಸಲಾಗಿದೆ. ಡ್ರಗ್ಸ್ ಮೂಲದ ಬಗ್ಗೆ ವಿಚಾರಿಸಲಾಗಿ ಕೇರಳದ ಅಬ್ದುಲ್ ಕರೀಂ ಎಂಬಾತ ನೀಡಿದ ಹಣದಿಂದ ಮುಂಬೈಯಲ್ಲಿ ವಾಸವಿರುವ ಆಫ್ರಿಕನ್ ಪ್ರಜೆ ಬೆಂಜಮಿನ್ ಎಂಬಾತನಿಂದ ಆರೋಪಿ ಚಿರಾಗ್ ಸನಿಲ್ ಖರೀದಿ ಮಾಡಿ ತಂದಿರುವ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 143/2025 U/S 8(C), 21(C), 22(C) NDPS ACT ಅಡಿ ಪ್ರಕರಣ ದಾಖಲಾಗಿದೆ.
ಪ್ರಕರಣದಲ್ಲಿ ಮಾದಕ ವಸ್ತು ಖರೀದಿಸಲು ಹಣ ನೀಡಿದ ಅಬ್ದುಲ್ ಕರೀಂ ಇ.ಕೆ ಎಂಬಾತನನ್ನು ಸೆ.22ರಂದು ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದ ಬಳಿ ದಸ್ತಗಿರಿ ಮಾಡಲಾಯಿತು. ಸದ್ರಿ ಆರೋಪಿಗಳನ್ನು ವಿಚಾರಿಸಿದಾಗ ತಮ್ಮ ಬಳಿ ಇದ್ದ ಕೊಕೇನ್ ಮಾದಕ ವಸ್ತುಗಳನ್ನು ಈಗಾಗಲೇ ಮೂರು ವ್ಯಕ್ತಿಗಳಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಸಿಸಿಬಿ ಘಟಕದ ಪೊಲೀಸ್ ಉಪ ನಿರೀಕ್ಷಕರು ಸದರಿ ವ್ಯಕ್ತಿಗಳ ಮಾಹಿತಿ ಪಡೆದು ಸೆ.21ರಂದು ರಾತ್ರಿ 8.45 ಗಂಟೆಗೆ ಮಣ್ಣಗುಡ್ಡೆಯ ಸೆಂಟ್ರಲ್ ವೇರ್ ಹೌಸ್ ಬಳಿ ಮೂರು ಸ್ಕೂಟರ್ ಗಳಲ್ಲಿ ನಿಂತುಕೊಂಡಿದ್ದವರನ್ನು ವಶಕ್ಕೆ ಪಡೆದಾಗ ತಪ್ಪಿಸಿ ಪರಾರಿಯಾಗಲು ಪ್ರಯತ್ನಿಸಿದ್ದಾರೆ. ಅವರಿಂದ ಸುಮಾರು 21.03 ಗ್ರಾಂ ಕೊಕೇನ್ (ಮೌಲ್ಯ ರೂ. 1,90000/) ಸ್ವಾಧೀನ ಪಡಿಸಿದ್ದು ಆರೋಪಿಗಳನ್ನು ಜನನ್ @ ಜನನ್ ಜಗನ್ನಾಥ, ರಾಜೇಶ್ ಬಂಗೇರ ಮತ್ತು ವರುಣ್ ಗಾಣಿಗ ಎಂದು ಗುರುತಿಸಲಾಗಿದೆ. ಇವರ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 97/2025 ಕಲಂ 8(C), 22(b) NDPS ACT ಮತ್ತು ಕಲಂ3(5) B.N.S ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
The CCB police unit in Mangaluru has cracked down on a drug supply network, arresting six individuals in connection with two separate cases involving the sale of cocaine and MDMA in the city. Narcotics valued at over ₹25 lakh were seized during the operation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am