ಬ್ರೇಕಿಂಗ್ ನ್ಯೂಸ್
23-09-25 11:01 am HK News Desk ಕ್ರೈಂ
ನವದೆಹಲಿ, ಸೆ.23 : ತಮ್ಮನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಸೈಬರ್ ವಂಚಕರು ದಕ್ಷಿಣ ದೆಹಲಿಯ ಗುಲ್ಮೋಹರ್ ಪಾರ್ಕ್ ಪ್ರದೇಶದಲ್ಲಿ ನಿವೃತ್ತ ಬ್ಯಾಂಕರ್ ಒಬ್ಬರನ್ನು ಒಂದು ತಿಂಗಳ ಕಾಲ "ಡಿಜಿಟಲ್ ಅರೆಸ್ಟ್" ಬಂಧನದಲ್ಲಿರಿಸಿದ್ದಾಗಿ ಯಾಮಾರಿಸಿ ಅವರಿಂದಲೇ 23 ಕೋಟಿ ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ.
ಆರೋಪಿಗಳು ನಿಮ್ಮ ಆಧಾರ್ ಕಾರ್ಡ್ ನಂಬರ್, ಮಾದಕ ದ್ರವ್ಯ ಸಾಗಣೆ, ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ಹೇಳಿದ್ದು, ತನಿಖೆಯ ನೆಪದಲ್ಲಿ ಫ್ಲಾಟ್ ಒಳಗೆ ಇರಬೇಕೆಂದು ಹೇಳಿ ಯಾಮಾರಿಸಿದ್ದಾರೆ. ಆತನನ್ನು ಮನೆಯಿಂದ ಹೊರಗೆ ಹೋಗದಂತೆ ಸೂಚಿಸಿದ್ದಲ್ಲದೆ, ಯಾರೊಂದಿಗೂ ಮಾತನಾಡುವಂತಿಲ್ಲ. ಇಲ್ಲದಿದ್ದರೆ ನೇರವಾಗಿ ಬಂದು ಅರೆಸ್ಟ್ ಮಾಡ್ತೀವಿ ಎಂದು ಬೆದರಿಸಿ, ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ.
78 ವರ್ಷದ ನಿವೃತ್ತ ಬ್ಯಾಂಕರ್ ಮೋಸ ಹೋಗಿದ್ದು, ಆಗಸ್ಟ್ 4 ರಂದು ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಳ್ಳುವ ವ್ಯಕ್ತಿ ಕರೆ ಮಾಡಿದ್ದರು. ಇಡಿ ಮತ್ತು ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಂಡು ಸಂಪರ್ಕಿಸಿದ್ದು, ವಿಷಯ ಯಾರಿಗೂ ಹೇಳದಂತೆ ಬೆದರಿಸಿದ್ದರು ಎಂದು ದೂರು ನೀಡಿದ್ದಾರೆ. ವಂಚನೆ ಜಾಲದ ಈ ಕೃತ್ಯ ಸೆಪ್ಟೆಂಬರ್ 4 ರ ವರೆಗೆ ಮುಂದುವರೆದಿತ್ತು. ಆನಂತರ ಫೋನ್ ಬರುವುದು ಕಡಿಮೆಯಾದ ಸಂದರ್ಭದಲ್ಲಿ ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೆಪ್ಟೆಂಬರ್ 19 ರಂದು NCRP ಪೋರ್ಟಲ್ನಲ್ಲಿ ದೂರು ದಾಖಲಿಸಿದ್ದಾರೆ.
ಎಫ್ಐಆರ್ ದಾಖಲಿಸಿ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು, ಮೊತ್ತದಲ್ಲಿ 12.11 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಖಾತೆಗಳಲ್ಲಿ ಫ್ರೀಜ್ ಮಾಡಿದ್ದಾರೆ. ತನಿಖೆ ವೇಳೆ ಹಣವನ್ನು ಹಲವು ಖಾತೆಗಳಿಗೆ ವರ್ಗಾಯಿಸಿ, ದೇಶದ ವಿವಿಧ ಭಾಗಗಳಲ್ಲಿ ಡ್ರಾ ಮಾಡಿರುವುದು ಪತ್ತೆಯಾಗಿದೆ.
A 78-year-old former banker from South Delhi received a phone call last month. The caller, who claimed that the banker’s mobile number had been used for “fraudulent” and “illegal” activities, introduced herself as a senior official of a telecom company and later claimed that Mumbai police officers were involved in the “probe” into the incident.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm