ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm