ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am