ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm