ಬ್ರೇಕಿಂಗ್ ನ್ಯೂಸ್
27-09-25 01:06 pm Bangalore Correspondent ಕ್ರೈಂ
ಬೆಂಗಳೂರು, ಸೆ.27 : ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಮಹಿಳಾ ವಿಜ್ಞಾನಿಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿ ಮೂರು ದಿನ ಡಿಜಿಟಲ್ ಅರೆಸ್ಟ್ ಮಾಡಿದ್ದಲ್ಲದೆ 8.80 ಲಕ್ಷ ರೂ. ಪೀಕಿಸಿ ವಂಚಿಸಿದ ಘಟನೆ ನಡೆದಿದೆ. 49 ವರ್ಷದ ಮಹಿಳಾ ವಿಜ್ಞಾನಿ ನೀಡಿದ ದೂರಿನ ಅನ್ವಯ ಕೇಂದ್ರ ವಿಭಾಗದ ಸೈಬರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸೆ.16ರಂದು ಅಪರಿಚಿತನೊಬ್ಬ ವಿಜ್ಞಾನಿಗೆ ಕರೆ ಮಾಡಿ ತಾನು ಸಿಬಿಐ ಅಧಿಕಾರಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ‘‘ ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡ್ ಬೇರೆಯವರು ಬಳಸುತ್ತಿದ್ದು, ಮಾನವ ಕಳ್ಳಸಾಗಣೆ ಸೇರಿ 17 ಪ್ರಕರಣಗಳು ದಾಖಲಾಗಿವೆ’’ ಎಂದು ಬೆದರಿಸಿದ್ದ. ಸದ್ಯಕ್ಕೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ತನಿಖೆಗೆ ಸಹಕರಿಸದಿದ್ದರೆ ಬಂಧಿಸಲಾಗುವುದು ಎಂದು ಬೆದರಿಸಿದ್ದ.
ಅಲ್ಲದೆ, ‘ಹೇಳಿದಂತೆ ಕೇಳಿದರೆ ಸಹಾಯ ಮಾಡುತ್ತೇನೆ’ ಎಂದು ನಂಬಿಸಿದ್ದ. ‘ತನಿಖೆ ಪೂರ್ಣವಾಗುವ ತನಕ ಮನೆಯವರಿಗೆ ವಿಷಯ ತಿಳಿಸಬಾರದು. ಒಂದು ವೇಳೆ ಮನೆಯವರಿಗೆ ಹೇಳಿದರೆ ಹೊರಗಡೆ ಇರುವ ಸಿಬ್ಬಂದಿ ತಕ್ಷಣ ಬಂಧಿಸಲಿದ್ದಾರೆ’ ಎಂದೂ ಹೇಳಿದ್ದ.
ನಿಜವಾಗಿಯೂ ಸಿಬಿಐ ಅಧಿಕಾರಿಯೇ ಮಾತನಾಡುತ್ತಿದ್ದಾರೆ ಎಂಬ ಆತಂಕದಿಂದ ಮೂರು ದಿನ ಡಿಜಿಟಲ್ ಅರೆಸ್ಟ್ಗೆ ಒಳಗಾಗಿದ್ದ ವಿಜ್ಞಾನಿ, ವಂಚಕರು ನೀಡಿದ ಬ್ಯಾಂಕ್ ಖಾತೆಗೆ 8.80 ಲಕ್ಷ ರೂ. ವರ್ಗಾಯಿಸಿದ್ದರು. ಮತ್ತಷ್ಟು ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನದಲ್ಲಿ ಕುಟುಂಬಸ್ಥರ ನಡುವೆ ಚರ್ಚಿಸಿದಾಗ ಸೈಬರ್ ವಂಚಕರ ಕೃತ್ಯ ಎಂದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking case of cybercrime, a woman scientist from the Indian Institute of Science (IISc) was defrauded of ₹8.80 lakh after being trapped in a “digital arrest” by cyber fraudsters posing as Central Bureau of Investigation (CBI) officials.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm