ಬ್ರೇಕಿಂಗ್ ನ್ಯೂಸ್
28-09-25 05:04 pm Mangalore Correspondent ಕ್ರೈಂ
ಮಂಗಳೂರು, ಸೆ.28 : ವಾಟ್ಸಪ್ ಮೆಸೇಜ್ ನಂಬಿ ನಕಲಿ ಷೇರು ಮಾರುಕಟ್ಟೆಯ ಲಿಂಕ್ ಕ್ಲಿಕ್ ಮಾಡಿ ಹಣ ಡಬಲ್ ಮಾಡಲು ಹೋದ ಮಹಿಳೆಯೊಬ್ಬರು 15 ದಿನದಲ್ಲಿ ಬರೋಬ್ಬರಿ 45 ಲಕ್ಷ ರು. ಕಳಕೊಂಡಿದ್ದು ಮೋಸ ತಿಳಿಯುತ್ತಿದ್ದಂತೆ ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ದೂರುದಾರೆ ಮಹಿಳೆಗೆ ಕಳೆದ ಆಗಸ್ಟ್ ನಲ್ಲಿ ಷೇರ್ ಮಾರ್ಕೆಟ್ ಎಂದು ಹೇಳಿ ಲಿಂಕ್ ಬಂದಿತ್ತು. ಲಿಂಕ್ ಕ್ಲಿಕ್ ಮಾಡಿದ ವೇಳೆ F9 Indian Market Forum ಎಂಬ ವಾಟ್ಸಪ್ ಗ್ರೂಪ್ (ಗ್ರೂಪ್ ನ ಅಡ್ಮಿನ್ Jass singh 8597164645, Jinal viral mehta 7619640978, +447352579985, 7659855761) ಓಪನ್ ಆಗಿತ್ತು. ಸದ್ರಿ ಗ್ರೂಪ್ ನಲ್ಲಿ ಸ್ಟಾಕ್ ಮಾರ್ಕೆಟ್ ಬಗ್ಗೆ ಜಾಹೀರಾತನ್ನು ನೀಡಿ, ಇನ್ ವೆಸ್ಟ್ ಮೆಂಟ್ ಬಗ್ಗೆ ಆಸಕ್ತಿಯಿದ್ದರೆ “CERBER INV” ಎಂಬ ಆಪ್ ನಲ್ಲಿ ನೊಂದಾಯಿಸುವಂತೆ ಸೂಚಿಸಿದ್ದರು. ಸದ್ರಿ ಲಿಂಕ್ ಮುಖಾಂತರ ತನ್ನ ಹೆಸರು, ಮೊಬೈಲ್ ನಂಬ್ರ ಮತ್ತು ಇಮೇಲ್ ಐ.ಡಿ.ಯನ್ನು ಸದ್ರಿ ಆಪ್ ನಲ್ಲಿ ನೊಂದಾಯಿಸಿದ್ದರು.

ಆನಂತರ, ಈ ಹಿಂದೆ ಇದ್ದ ವಾಟ್ಸಪ್ ಗ್ರೂಪ್ ನಿಂದ ತೆಗೆದು “Investment Alliance Elite Group B3” ನೇ ವಾಟ್ಸಪ್ ಗ್ರೂಪ್ ಸೇರಿಸಲಾಗಿತ್ತು. ಸದ್ರಿ ಗ್ರೂಪ್ ನಲ್ಲಿ ಶೇರ್ ಮಾರ್ಕೆಟಿಂಗ್ ಸ್ಟಾಕ್ಸ್ & ಇನ್ ವೆಸ್ಟ್ ಮೆಂಟ್ ಬಗ್ಗೆ ವಿವರಿಸುತ್ತ ಹೆಚ್ಚಿನ ಲಾಭ ಗಳಿಸಲು ಹೂಡಿಕೆ ಮಾಡಲು ಹೇಳುತ್ತಿದ್ದರು. ರಿಚಾರ್ಜ್ ಮಾಡುವುದಕ್ಕಾಗಿ ಅಡ್ಮಿನ್ ಮ್ಯಾನೇಜರ್ ರಿಯಾ ಎಂಬವರನ್ನು ಸಂಪರ್ಕಿಸಿ ಎಂದು +1(307)412-4480 ನೇ ನಂಬರ್ ನೀಡಿದ್ದು ಸದ್ರಿ ರಿಯಾ ಹೇಳಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಮಹಿಳೆ ತನ್ನ ಖಾತೆಯಿಂದ ಹಣ ಹಾಕಿದ್ದರು. ಅದರಂತೆ ಸೆ.9ರಿಂದ 25ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 45,10,000/- ರೂ. ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ IMPS & RTGS ಹಾಗು UPI ಮೂಲಕ ವರ್ಗಾವಣೆ ಮಾಡಿದ್ದು ಮತ್ತೆ 33 ಲಕ್ಷ ಪಾವತಿಸಲು ಒತ್ತಾಯಿಸಿದ್ದರು. ಅಷ್ಟರಲ್ಲಿ ಅನುಮಾನಗೊಂಡ ಮಹಿಳೆ ತನ್ನ ಹಿಂದಿನ ಮೊತ್ತ ನೀಡುವಂತೆ ಸದ್ರಿ ವಾಟ್ಸಪ್ ಗ್ರೂಪ್ ನಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ಸ್ವೀಕರಿಸದೆ ಮೋಸ ಮಾಡಿದ್ದರು.
A woman from Mangaluru lost ₹45 lakh in just 15 days after falling prey to a fake stock market scam promoted through WhatsApp messages.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am