ಬ್ರೇಕಿಂಗ್ ನ್ಯೂಸ್
28-09-25 05:04 pm Mangalore Correspondent ಕ್ರೈಂ
ಮಂಗಳೂರು, ಸೆ.28 : ವಾಟ್ಸಪ್ ಮೆಸೇಜ್ ನಂಬಿ ನಕಲಿ ಷೇರು ಮಾರುಕಟ್ಟೆಯ ಲಿಂಕ್ ಕ್ಲಿಕ್ ಮಾಡಿ ಹಣ ಡಬಲ್ ಮಾಡಲು ಹೋದ ಮಹಿಳೆಯೊಬ್ಬರು 15 ದಿನದಲ್ಲಿ ಬರೋಬ್ಬರಿ 45 ಲಕ್ಷ ರು. ಕಳಕೊಂಡಿದ್ದು ಮೋಸ ತಿಳಿಯುತ್ತಿದ್ದಂತೆ ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ದೂರುದಾರೆ ಮಹಿಳೆಗೆ ಕಳೆದ ಆಗಸ್ಟ್ ನಲ್ಲಿ ಷೇರ್ ಮಾರ್ಕೆಟ್ ಎಂದು ಹೇಳಿ ಲಿಂಕ್ ಬಂದಿತ್ತು. ಲಿಂಕ್ ಕ್ಲಿಕ್ ಮಾಡಿದ ವೇಳೆ F9 Indian Market Forum ಎಂಬ ವಾಟ್ಸಪ್ ಗ್ರೂಪ್ (ಗ್ರೂಪ್ ನ ಅಡ್ಮಿನ್ Jass singh 8597164645, Jinal viral mehta 7619640978, +447352579985, 7659855761) ಓಪನ್ ಆಗಿತ್ತು. ಸದ್ರಿ ಗ್ರೂಪ್ ನಲ್ಲಿ ಸ್ಟಾಕ್ ಮಾರ್ಕೆಟ್ ಬಗ್ಗೆ ಜಾಹೀರಾತನ್ನು ನೀಡಿ, ಇನ್ ವೆಸ್ಟ್ ಮೆಂಟ್ ಬಗ್ಗೆ ಆಸಕ್ತಿಯಿದ್ದರೆ “CERBER INV” ಎಂಬ ಆಪ್ ನಲ್ಲಿ ನೊಂದಾಯಿಸುವಂತೆ ಸೂಚಿಸಿದ್ದರು. ಸದ್ರಿ ಲಿಂಕ್ ಮುಖಾಂತರ ತನ್ನ ಹೆಸರು, ಮೊಬೈಲ್ ನಂಬ್ರ ಮತ್ತು ಇಮೇಲ್ ಐ.ಡಿ.ಯನ್ನು ಸದ್ರಿ ಆಪ್ ನಲ್ಲಿ ನೊಂದಾಯಿಸಿದ್ದರು.

ಆನಂತರ, ಈ ಹಿಂದೆ ಇದ್ದ ವಾಟ್ಸಪ್ ಗ್ರೂಪ್ ನಿಂದ ತೆಗೆದು “Investment Alliance Elite Group B3” ನೇ ವಾಟ್ಸಪ್ ಗ್ರೂಪ್ ಸೇರಿಸಲಾಗಿತ್ತು. ಸದ್ರಿ ಗ್ರೂಪ್ ನಲ್ಲಿ ಶೇರ್ ಮಾರ್ಕೆಟಿಂಗ್ ಸ್ಟಾಕ್ಸ್ & ಇನ್ ವೆಸ್ಟ್ ಮೆಂಟ್ ಬಗ್ಗೆ ವಿವರಿಸುತ್ತ ಹೆಚ್ಚಿನ ಲಾಭ ಗಳಿಸಲು ಹೂಡಿಕೆ ಮಾಡಲು ಹೇಳುತ್ತಿದ್ದರು. ರಿಚಾರ್ಜ್ ಮಾಡುವುದಕ್ಕಾಗಿ ಅಡ್ಮಿನ್ ಮ್ಯಾನೇಜರ್ ರಿಯಾ ಎಂಬವರನ್ನು ಸಂಪರ್ಕಿಸಿ ಎಂದು +1(307)412-4480 ನೇ ನಂಬರ್ ನೀಡಿದ್ದು ಸದ್ರಿ ರಿಯಾ ಹೇಳಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಮಹಿಳೆ ತನ್ನ ಖಾತೆಯಿಂದ ಹಣ ಹಾಕಿದ್ದರು. ಅದರಂತೆ ಸೆ.9ರಿಂದ 25ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 45,10,000/- ರೂ. ಗಳನ್ನು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ IMPS & RTGS ಹಾಗು UPI ಮೂಲಕ ವರ್ಗಾವಣೆ ಮಾಡಿದ್ದು ಮತ್ತೆ 33 ಲಕ್ಷ ಪಾವತಿಸಲು ಒತ್ತಾಯಿಸಿದ್ದರು. ಅಷ್ಟರಲ್ಲಿ ಅನುಮಾನಗೊಂಡ ಮಹಿಳೆ ತನ್ನ ಹಿಂದಿನ ಮೊತ್ತ ನೀಡುವಂತೆ ಸದ್ರಿ ವಾಟ್ಸಪ್ ಗ್ರೂಪ್ ನಲ್ಲಿದ್ದ ಮೊಬೈಲ್ ನಂಬರ್ ಗೆ ಕರೆ ಮಾಡಿದಾಗ ಸ್ವೀಕರಿಸದೆ ಮೋಸ ಮಾಡಿದ್ದರು.
A woman from Mangaluru lost ₹45 lakh in just 15 days after falling prey to a fake stock market scam promoted through WhatsApp messages.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 07:03 pm
HK News Staffer
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
31-07-26 06:01 pm
HK News Staffer
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm