ಬ್ರೇಕಿಂಗ್ ನ್ಯೂಸ್
29-09-25 01:24 pm Mangalore Correspondent ಕ್ರೈಂ
ಮಂಗಳೂರು, ಸೆ.29 : ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ ಒಂದೂವರೆ ಕೋಟಿ ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆಗೈದ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಅಪ್ರಾಪ್ತ ಬಾಲಕ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.
ಸೆ.26 ರಂದು ಹಂಪನಕಟ್ಟೆಯ ಚಾಯ್ಸ್ ಗೋಲ್ಡ್ ಹೆಸರಿನ ಚಿನ್ನಾಭರಣದ ಅಂಗಡಿಯ ಕೆಲಸಗಾರ ಮುಸ್ತಾಫ ಎಂಬವರು ಸ್ಕೂಟರ್ ಸೀಟಿನ ಅಡಿಯಲ್ಲಿ ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ರಾತ್ರಿ ಸುಮಾರು 8-45 ವೇಳೆಗೆ ದರೋಡೆ ನಡೆದಿತ್ತು. ಮಂಗಳೂರು ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಇಬ್ಬರು ಆರೋಪಿಗಳು ಸ್ಕೂಟರಿನಲ್ಲಿ ಬಂದು ತಡೆದು ನಿಲ್ಲಿಸಿ, ಇನ್ನಿಬ್ಬರು ಕಾರಿನಲ್ಲಿ ಬಂದು ಮುಸ್ತಾಫ ರವರನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆ ನಡೆಸಿ ಎಕ್ಕೂರು ಎಂಬಲ್ಲಿ ಇಳಿಸಿ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 111/2025 ಕಲಂ 137(2), 310(2) BNS -2023 ರಂತೆ ಪ್ರಕರಣ ದಾಖಲಾಗಿತ್ತು. ಒಂದೂವರೆ ಕೋಟಿ ಮೌಲ್ಯದ 1650 ಗ್ರಾಮ್ ಚಿನ್ನದ ಗಟ್ಟಿಯನ್ನು ದರೋಡೆ ಮಾಡಲಾಗಿತ್ತು.



ಕೆ.ಸಿ.ರೋಡ್ ಕೋಟೆಕಾರು ನಿವಾಸಿ ಫಾರಿಶ್(18), ಮುಕ್ಕಚೇರಿ ನಿವಾಸಿ ಸಫ್ವಾನ್ (23), ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಅರಾಫತ್ ಆಲಿ(18), ಉಳ್ಳಾಲ ದರ್ಗಾ ಬಳಿಯ ಫರಾಝ್, (19) ಮತ್ತು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನೂ ಅರೆಸ್ಟ್ ಆಗಿದ್ದಾನೆ.
ಪ್ರಕರಣದಲ್ಲಿ ಅಪ್ರಾಪ್ತ ಬಾಲಕ ಹಂಪನಕಟ್ಟೆಯ ಚಾಯ್ಸ್ ಗೋಲ್ಡ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು ಚಿನ್ನದ ಗಟ್ಟಿಯನ್ನು ಕೊಂಡುಹೋಗುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿದ್ದರು. ಮುಸ್ತಫಾ ಚಿನ್ನದ ಗಟ್ಟಿಯೊಂದಿಗೆ ತೆರಳುವ ಚಲನವಲನದ ಮಾಹಿತಿಯನ್ನು ಆರೋಪಿ ಫಾರಿಶ್ ನಿಗೆ ನೀಡಿದ್ದು ಅದರಂತೆ ಆರೋಪಿಗಳು ಪೂರ್ವಯೋಜಿತ ಸಂಚು ರೂಪಿಸಿದ್ದರು., ಆರೋಪಿ ಸಫ್ವಾನ್ ಕಾರನ್ನು ಒದಗಿಸಿದ್ದು, ಚಿನ್ನದ ಗಟ್ಟಿಯನ್ನು ಇಟ್ಟುಕೊಂಡು ಹೋಗುತ್ತಿದ್ದಾಗ ಆರೋಪಿಗಳಾದ ಅರಾಫತ್ ಆಲಿ ಮತ್ತು ಫರಾಝ್ ಸುಜುಕಿ ಆಕ್ಸೆಸ್ ಸ್ಕೂಟರಿನಲ್ಲಿ ಬಂದು ಅಡ್ಡಗಟ್ಟಿ, ಇದೇ ಸಮಯ ಉಳಿದ ಆರೋಪಿಗಳು ಸಫ್ವಾನ್ ಒದಗಿಸಿದ ಬಿಳಿ ಬಣ್ಣದ ಕಾರಿನಲ್ಲಿ ಬಂದು ಮುಸ್ತಾಫರವರನ್ನು ಬಲತ್ಕಾರವಾಗಿ ಕಾರಿನಲ್ಲಿ ಹಾಕಿ ಅಪಹರಿಸಿಕೊಂಡು ಹೋಗಿದ್ದರು.
ಪ್ರಕರಣದಲ್ಲಿ ಕೃತ್ಯಕ್ಕೆ ಸುಜುಕಿ ಆಕ್ಸೆಸ್ ಸ್ಕೂಟರನ್ನು ಸ್ವಾಧೀನಪಡಿಸಿದ್ದು ಉಳಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಸೊತ್ತನ್ನು ಸ್ವಾಧೀನಪಡಿಸಿಕೊಳ್ಳಲು ಬಾಕಿ ಇರುತ್ತದೆ. ಪ್ರಕರಣದ ಆರೋಪಿಗಳನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆ ಅಧಿಕಾರಿ ಸಿಬ್ಬಂದಿ ಹಾಗೂ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದಾರೆ.
In Mangaluru, CCB police have arrested four youths from Ullal, including a minor, in connection with the abduction of a jewellery store employee and the looting of 1.5 kg gold worth ₹1.5 crore. The heist was planned with insider information provided by the minor employee. While the scooter used in the crime has been seized, efforts are on to recover the car and the stolen gold.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am