ಬ್ರೇಕಿಂಗ್ ನ್ಯೂಸ್
01-10-25 02:39 pm Mangalore Correspondent ಕ್ರೈಂ
ಮಂಗಳೂರು, ಅ.1 : ಸಾಮಾಜಿಕ ಜಾಲತಾಣದಲ್ಲಿ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಈ ಷೇರಿನಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ಪ್ರಚಾರ ಮಾಡುವ ವಿಡಿಯೋ ನೋಡಿ ನಿಜವೆಂದು ನಂಬಿದ ಮಂಗಳೂರಿನ ಮಹಿಳೆಯೊಬ್ಬರು 9.10 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ನಗರದ ಉರ್ವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.26ರಂದು ಮಹಿಳೆ ಫೇಸ್ಬುಕ್ ನೋಡುತ್ತಿದ್ದಾಗ ಸುಧಾಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಬಗ್ಗೆ ಪ್ರಚಾರ ಮಾಡುವ ಎಐ ವಿಡಿಯೋ ನೋಡಿದ್ದಾರೆ. ವಿಡಿಯೋದಲ್ಲಿ ಈ ಷೇರಿನಲ್ಲಿ ಹಣ ಹೂಡಿದರೆ ನಿಮ್ಮ ಹಣ ಡಬಲ್ ಆಗೋದು ಖಚಿತ, ಇದಕ್ಕೆ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ ಎಂಬಿತ್ಯಾದಿಯಾಗಿ ಜನರನ್ನು ನಂಬಿಸುವ ರೀತಿ ವಿಡಿಯೋಗಳಿದ್ದವು.
ಇದನ್ನು ನಂಬಿದ ಮಹಿಳೆ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತನ್ನ ಹೆಸರು ನೋಂದಣಿ ಮಾಡಿದ್ದಾರೆ. ಅದೇ ದಿನ ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಹೂಡಿಕೆ ಮಾಡಲು 20,664 ರೂ. ಹಣ ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಮಹಿಳೆ ಹಣ ಡಿಕೆ ಪಾವತಿಸಿದ್ದಾರೆ.
ಆನಂತರ ವ್ಯಕ್ತಿ ತಿಳಿಸಿದಂತೆ ಆ ಕಂಪನಿಯ ವೆಬ್ಸೈಟ್ನಲ್ಲಿ ಲಾಗಿನ್ ಕೂಡ ಆಗಿದ್ದಾರೆ. ಅದೇ ದಿನ ಇನ್ನೊಬ್ಬ ಅಪರಿಚಿತ ವ್ಯಕ್ತಿ ಮೆಸೇಜ್ ಮತ್ತು ಕರೆ ಮಾಡಿ ಹೂಡಿಕೆ ಮೂಲಕ ಹೆಚ್ಚು ಹಣ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ಅದರಂತೆ, ಡಬಲ್ ಆಗುತ್ತೆ ಎಂಬ ನಂಬಿಕೆಯಲ್ಲಿ 8.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 9,10,664 ರೂ. ಹೂಡಿಕೆ ಮಾಡಿದ್ದು ಬಳಿಕ ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟಬೇಕು ಎಂದು ಹೇಳಿದ್ದು ಮಹಿಳೆ ತಾನು ಮೋಸ ಹೋಗಿರುವ ಶಂಕೆ ಉಂಟಾಗಿದೆ. ಇದರಿಂದ ಮಹಿಳೆ ಪೊಲೀಸ್ ದೂರು ನೀಡಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
A woman from Mangaluru lost ₹9.10 lakh after believing an AI-generated video circulating on Facebook that used the names of Infosys Foundation’s Sudha Murty and Union Finance Minister Nirmala Sitharaman. The video falsely claimed that investments in a certain scheme would double with government guarantee.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm