ಬ್ರೇಕಿಂಗ್ ನ್ಯೂಸ್
27-12-20 08:50 pm Mangaluru Correspondent ಕ್ರೈಂ
ಉಳ್ಳಾಲ, ಡಿ.27: ಬೈಕಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆಯ ಕತ್ತಿನಿಂದ ಸರ ಎಗರಿಸಲು ಯತ್ನಿಸಿದ್ದು ತುಂಡಾಗಿ ರಸ್ತೆಗೆ ಬಿದ್ದ ಸರವನ್ನು ಅಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ಭಟ್ನಗರದಲ್ಲಿ ನಡೆದಿದೆ.
ಚೆಂಬುಗುಡ್ಡೆ ರುದ್ರಭೂಮಿ ಬಳಿಯ ನಿವಾಸಿ ಹರೀಶ್ ಟೈಲರ್ ಅವರ ಪತ್ನಿ ಲಕ್ಷ್ಮಿ ಶೆಟ್ಟಿ (30)ಯವರ ಸರವನ್ನು ಬೈಕಲ್ಲಿ ಬಂದ ಆಗಂತುಕರು ಎಗರಿಸಲು ಪ್ರಯತ್ನಿಸಿದ್ದಾರೆ. ಲಕ್ಷ್ಮೀ ಅವರು ಕೆಲಸ ಮುಗಿಸಿ ಸಂಜೆ ಭಟ್ನಗರದ ರಸ್ತೆಯಲ್ಲಿ ಮನೆಗೆ ಮರಳುತ್ತಿದ್ದ ವೇಳೆ ಎದುರಿನಿಂದ ಬೈಕಲ್ಲಿ ಬಂದ ಇಬ್ಬರು ಆಗಂತುಕರು ಸುಮಾರು 10 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ತುಂಡರಿಸಿದ್ದಾರೆ. ಸರ ತುಂಡಾಗಿ ರಸ್ತೆಗೆ ಬಿದ್ದಿದ್ದು ಕಳ್ಳರು ಅದನ್ನು ಎಗರಿಸಲು ಪ್ರಯತ್ನಿಸಿದಾಗ ಮಹಿಳೆ ಬೊಬ್ಬಿಟ್ಟಿದ್ದು ಕಳ್ಳರು ಬೈಕಲ್ಲಿ ಪಲಾಯನಗೈದಿದ್ದಾರೆ. ಅಲ್ಲಿದ್ದ ಯುವಕರು ಕೂಡಲೇ ಕಳ್ಳರನ್ನು ಬೈಕಲ್ಲಿ ಬೆನ್ನಟ್ಟಿದ್ದು ಕಳ್ಳರು ಕೋಟೆಕಾರಿನ ಕಡೆಗೆ ಪಲಾಯನಗೈದಿರುವುದಾಗಿ ತಿಳಿದು ಬಂದಿದೆ.
ಸ್ಥಳಕ್ಕೆ ತೆರಳಿದ ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಐ ಪ್ರದೀಪ್, ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು ಕಳ್ಳರ ಶೋಧ ಕಾರ್ಯ ನಡೆಸುತ್ತಿದ್ದಾರೆ.
In a failed chain-snatching attempt in Mangalore, Thokottu, two bike-borne men escaped after the chain that they snatched broke and fell on the road. The Ullal police have registered the case.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am