ಬ್ರೇಕಿಂಗ್ ನ್ಯೂಸ್
07-10-25 10:31 am HK News Desk ಕ್ರೈಂ
ಕಾಸರಗೋಡು, ಅ.7 : ಕುಂಬಳೆ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಎಂಬಲ್ಲಿ ಭಾನುವಾರ ತಡರಾತ್ರಿ ಎರಡು ತಂಡಗಳ ಮಧ್ಯೆ ಗ್ಯಾಂಗ್ ವಾರ್ ನಡೆದಿದ್ದು ಈ ವೇಳೆ ಯುವಕನೊಬ್ಬನ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಅಲ್ಲಿಯೇ ಸಿಕ್ಕಿಕೊಂಡ ಘಟನೆ ನಡೆದಿದೆ. ಗ್ಯಾಂಗ್ ವಾರ್ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.
ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ಬದಿಯಡ್ಕ ಮತ್ತು ಸೀತಾಂಗೋಳಿಯ ಎರಡು ತಂಡಗಳ ಮಧ್ಯೆ ಹೊಡೆದಾಟ, ಚೂರಿ ಹಿಡಿದು ಬೀದಿ ಕಾಳಗ ನಡೆದಿದೆ. ಕಾರು, ಜೀಪಿನಲ್ಲಿ ಬಂದಿದ್ದ ಬದಿಯಡ್ಕದ ತಂಡವೊಂದು ರಸ್ತೆಯಲ್ಲಿ ನಿಂತಿದ್ದ ಜನರ ಮೇಲೆ ಕಾರು ಹಾಯಿಸಲು ಯತ್ನಿಸಿದೆ. ಗಲಾಟೆ ಮಧ್ಯೆ ಬದಿಯಡ್ಕ ನಿವಾಸಿ ಅನಿಲ್ ಕುಮಾರ್ ಎಂಬಾತನ ಕುತ್ತಿಗೆಗೆ ಚಾಕು ಇರಿಯಲಾಗಿದೆ. ಚಾಕು ಹಾಕಿದಾಗಲೇ ಪೊಲೀಸ್ ಜೀಪು ಬಂದಿದ್ದು ಚಾಕುವನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕುತ್ತಿಗೆಯಲ್ಲಿ ಚಾಕು ಸಿಕ್ಕಿಕೊಂಡಿರುವ ಫೋಟೊ ವೈರಲ್ ಆಗಿದ್ದು ಭಯಾನಕ ದೃಶ್ಯಕ್ಕೆ ಸಾಕ್ಷಿಯಾಗಿದೆ. ಇರಿತಕ್ಕೊಳಗಾದ ಅನಿಲ್ ಕುಮಾರ್ ನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.




ಅನಿಲ್ ಕುಮಾರ್ ಬದಿಯಡ್ಕದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಇರಿತದಿಂದ ಗಂಭೀರ ಗಾಯಗೊಂಡು ರಕ್ತದ ಓಕುಳಿಯಲ್ಲಿ ನೆಲಕ್ಕೆ ಬೀಳುವ ದೃಶ್ಯವೂ ಮೊಬೈಲಿನಲ್ಲಿ ಸೆರೆಯಾಗಿದೆ. ಚೂರಿ ಇರಿತ ಮಾಡುತ್ತಿದ್ದಾಗಲೇ ಅಲ್ಲಿಯೇ ಇನ್ನೊಬ್ಬ ವಿಡಿಯೋ ಮಾಡಿರುವುದು ಕಂಡುಬರುತ್ತದೆ. ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು ಕೃತ್ಯಕ್ಕೆ ಬಳಸಿದ ಎರಡು ವಾಹನವನ್ನು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ.
A violent gang clash broke out late Sunday night in Seethangoli, under Kumbla Police Station limits of Kasaragod district. Two rival groups from Badiyadka and Seethangoli reportedly fought over a financial dispute, leading to a brutal street brawl involving knives. During the fight, a youth named Anil Kumar from Badiyadka was stabbed in the neck, and the knife remained lodged in the wound. The shocking visuals of the incident have gone viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am