ಬ್ರೇಕಿಂಗ್ ನ್ಯೂಸ್
08-10-25 12:23 pm Mangalore Correspondent ಕ್ರೈಂ
ಮಂಗಳೂರು, ಅ.8 : ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ಕಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ಮೂಡುಬಿದ್ರೆ ಪೊಲೀಸರು ದಾಳಿ ನಡೆಸಿ ಮೂರು ದನಗಳನ್ನು ರಕ್ಷಿಸಿದ್ದಾರೆ.
ಜಲೀಲ್ ಕಲ್ಲಬೆಟ್ಟು ಎಂಬಾತನ ಮನೆಯ ಹಿಂಭಾಗದ ಗುಡ್ಡದಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದು ದನ ಕಡಿದು ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಸುಮಾರು 50 ಕೆ.ಜಿ. ದನದ ಮಾಂಸ ಮತ್ತು ಅದನ್ನು ಕತ್ತರಿಸಲು ಬಳಸಿದ ಪರಿಕರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳನ್ನು ಜಲೀಲ್ ಕಲ್ಲಬೆಟ್ಟು, ಸಾಹಿಲ್ ಮತ್ತು ಆತನ ಮಗ ಸೊಹೇಲ್, ಹಾಗೂ ಕುದ್ರೋಳಿ ನಿವಾಸಿ ಮೊಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಆದರೆ ಪೊಲೀಸರು ದಾಳಿ ಮಾಡುತ್ತಿದ್ದಂತೆ ಆರೋಪಿಗಳು ಮನೆಯ ಹಿಂಬದಿಯ ಗುಡ್ಡದಾಚೆ ಓಡಿ ಪರಾರಿಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಮಾಂಸವನ್ನು ಪಡೆಯಲು ಬಂದಿದ್ದ ಎರಡು ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಮತ್ತು ಸಿಬ್ಬಂದಿಗಳಾದ ಪಿಎಸ್ಐ ಕೃಷ್ಣಪ್ಪ, ಅಖೀಲ್ ಅಹ್ಮದ್ ಹಾಗೂ ನಾಗರಾಜ್ ಕಾರ್ಯಾಚರಣೆ ನಡೆಸಿದ್ದರು.
ಕಾಟಿಪಳ್ಳದ ಮನೆಯಲ್ಲೇ ಗೋಹತ್ಯೆ
ಕಾಟಿಪಳ್ಳ ಗ್ರಾಮದ 8ನೇ ಬ್ಲಾಕ್ ಚೊಕ್ಕಬೆಟ್ಟು ಅಂಚೆ ಕಚೇರಿ ರಸ್ತೆಯ ಅಬ್ದುಲ್ ಖಾದರ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ದನ ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಸುರತ್ಕಲ್ ಪೊಲೀಸ್ ಠಾಣೆ ಪಿಎಸ್ಐ ರಘುನಾಯಕ್ ಹಾಗೂ ಸಿಬಂದಿ ದಾಳಿ ಮಾಡಿ ಮೂವರು ಆರೋಪಿಗಳಾದ ಚೊಕ್ಕಬೆಟ್ಟುವಿನ ಅಜೀಜ್ ಅಹಮ್ಮದ್, (55) ಇಮ್ಮಿಯಾಜ್ (41) ಎ.ಕೆ. ಆಶೀಕ್, (22) ಅವರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಬಶೀರ್ ಚೊಕ್ಕಬೆಟ್ಟು ತಲೆಮರೆಸಿಕೊಂಡಿದ್ದಾನೆ. ಇಮ್ಮಿಯಾಜ್ ತಂದಿದ್ದ 2 ಹೆಣ್ಣು ಕರುಗಳನ್ನು ಬಶೀರ್ ಹಾಗೂ ಆಶೀಕ್ ಜತೆ ಸೇರಿಕೊಂಡು ವಧೆ ಮಾಡಿ ಸುಮಾರು 233.89 ಕೆಜಿ ದನದ ಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡಲು ಮುಂದಾಗಿದ್ದರು.
ಇಮ್ಮಿಯಾಜ್ ಮೇಲೆ ಮಂಗಳೂರು ನಗರದ ಬರ್ಕೆ, ಮೂಡುಬಿದಿರೆ, ಪಣಂ ಬೂರು, ಸುರತ್ಕಲ್ ಠಾಣೆ ಸೇರಿದಂತೆ ಉಡುಪಿ ಜಿಲ್ಲೆಯ ಕಾಪು, ಕುಂದಾಪುರ, ಕಾರ್ಕಳ ಠಾಣೆಯಲ್ಲಿ ಸುಮಾರು 9 ಪ್ರಕರಣಗಳು ದಾಖಲಾಗಿವೆ.
Police in Mangaluru have busted two illegal slaughterhouses operating in Moodbidri and Suratkal, seizing around 280 kilograms of beef and rescuing three cows. In Moodbidri’s Gantalkatte area, police raided the residence of Jaleel Kallabettu after receiving a tip-off about cow slaughter taking place behind his house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am