ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am