ಬ್ರೇಕಿಂಗ್ ನ್ಯೂಸ್
10-10-25 07:43 pm Bangalore Correspondent ಕ್ರೈಂ
ಬೆಂಗಳೂರು, ಅ10 : ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿಯನ್ನ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಗೆ ಬೀಗ ಹಾಕಿಕೊಂಡುಕೊಂಡು ಹೋಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಟೀ ಅಂಗಡಿ ಮಾಲೀಕನನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಭದ್ರಪ್ಪಲೇಔಟ್ ನಿವಾಸಿ ಸಂದೀಪ್ (31) ಎಂದು ಗುರುತಿಸಲಾಗಿದೆ. ಅ.8 ರಂದು ಕೊಡಿಗೇಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಸುಶೀಲ ಎಂಬುವವರು ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್ ಹಾಗೂ ಸುತ್ತ-ಮುತ್ತ ಗಣತಿ ಕಾರ್ಯ ಮಾಡುತ್ತಿದ್ದರು.
ಅದರಂತೆ ಅ.8ರಂದು ಗಣತಿಗಾಗಿ ಆರೋಪಿ ಸಂದೀಪ್ ಮನೆಗೆ ಕೂಡ ಹೋಗಿದ್ದಾರೆ. ಈ ವೇಳೆ ಸುಶೀಲ ಅವರು ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ನೀಡುವಂತೆ ಸಂದೀಪ್ ತಾಯಿಯ ಬಳಿ ಕೇಳಿದ್ದಾರೆ. ಅದರಂತೆ ಒಟಿಪಿ ಎಲ್ಲಾ ಪಡೆದ ಬಳಿಕ ಸಂದೀಪ್ ಮನೆಗೆ ಬಂದಿದ್ದಾನೆ.
ಈ ವೇಳೆ ಶಿಕ್ಷಕಿ ಸುಶೀಲ ಜತೆ ಸಮೀಕ್ಷೆ ಬಗ್ಗೆ ಪ್ರಶ್ನಿಸಿದ್ದಾನೆ. ಅಲ್ಲದೆ, ಸಮೀಕ್ಷೆ ಮಾಡಲು ಯಾರು ನಿಮಗೆ ಹೇಳಿದವರು, ಯಾಕೆ ದಾಖಲೆಗಳನ್ನು ಕೊಡಬೇಕು, ನೀವು ಸರ್ಕಾರಿ ಸಿಬ್ಬಂದಿ ಎಂದು ಹೇಗೆ ನಂಬಬೇಕು ಎಂದೆಲ್ಲ ಏರು ದ್ವನಿಯಲ್ಲಿ ಪ್ರಶ್ನಿಸಿದ್ದಾನೆ.
ಆಗ ಸುಶೀಲ ಅವರು ತಮ್ಮ ಗುರುತಿನ ಚೀಟಿಯನ್ನು ತೋರಿಸಿದ್ದಾರೆ. ಇಷ್ಟಾದರೂ ಸುಮ್ಮನಾಗದ ಸಂದೀಪ್ ಶಿಕ್ಷಕಿಯ ಜೊತೆ ಗಲಾಟೆ ಮಾಡಿದ್ದಾನೆ, ಜೊತೆಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಜೊತೆಗೆ ಮನೆಯ ಕಾಂಪೌಂಡ್ ಒಳಗೆ ಕೂಡಿ ಹಾಕಿ ಗೇಟ್ ಬೀಗ ಹಾಕಿ, ನಿಮ್ಮ ಕಂಪನಿಯವರನ್ನು ಕರೆಯಿಸುವಂತೆ ಹೇಳಿ ಅಲ್ಲಿಂದ ಹೋಗಿದ್ದಾನೆ.
ಇತ್ತ ಎಷ್ಟೇ ಮನವಿ ಮಾಡಿದರೂ ಕೇಳದಿದ್ದಾಗ ಸುಶೀಲ 112 ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಪೊಲೀಸರು ಶಿಕ್ಷಕಿಯನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆರೋಪಿ ಸಂದೀಪ್ ನನ್ನು ಸ್ಥಳಕ್ಕೆ ಕರೆಸಿಕೊಂಡು, ಅಲ್ಲಿಂದಲೇ ನೇರವಾಗಿ ಠಾಣೆಗೆ ಕರೆದೊಯ್ದಿದ್ದಾರೆ.
ಸದ್ಯ ಶಿಕ್ಷಕಿ ಸುಶೀಲ ಅವರು ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ಸಂದೀಪ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನ್ಯಾಯಾಲಯದ ಸೂಚನೆಯ ಮೇರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A shocking incident occurred in Bhadrappa Layout, Kodigehalli, where a government school teacher conducting the caste census survey was allegedly locked inside a house compound and verbally abused by a local resident.
10-10-25 07:06 pm
HK News Desk
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
10-10-25 10:37 pm
HK News Desk
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
10-10-25 06:52 pm
Mangalore Correspondent
ನಿಷೇಧಿತ ಪಿಎಫ್ಐ ಸಂಘಟನೆ ಪರವಾಗಿ ಪೋಸ್ಟ್ ; ಮುಸ್ಲಿಂ...
10-10-25 04:18 pm
Bharath Kumdel Arrest, Abdul Rahiman Murder:...
10-10-25 02:02 pm
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗಿಯಾದ ದಕ್ಷಿಣ ಕನ್ನಡ...
09-10-25 08:22 pm
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm