ಬ್ರೇಕಿಂಗ್ ನ್ಯೂಸ್
28-12-20 01:03 pm Headline Karnataka News Network ಕ್ರೈಂ
ನವದೆಹಲಿ, ಡಿ.28: ಮಹಿಳೆಯೊಬ್ಬಳು ಐದು ತಿಂಗಳ ಮಗುವನ್ನು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿ ಗುಡ್ಡಿಸಿಂಗ್ ಗೊಂಡ್(27) ಜಿಲ್ಲೆಯ ಸುಖರ್ ಗ್ರಾಮದ ನಿವಾಸಿಯಾಗಿದ್ದಾರೆ. ಆಕೆ ತಾನು ಹೆತ್ತ ಗಂಡು ಮಗುವನ್ನು ತನ್ನ ಕೈಯಾರೆ ಬೆಂಕಿ ಹಚ್ಚಿ ಕೊಂದಿದ್ದಾಳೆ.
ಈ ವಿಚಾರವಾಗಿ ತನಿಖೆ ನಡೆಸಿದ ಚಿತ್ರಂಗಿ ಪೊಲೀಸ್ ಠಾಣೆಯ ಪೊಲೀಸರು ಮಹಿಳೆ ಮಾನಸಿಕ ಅಸ್ವಸ್ಥಳಾಗಿದ್ದು, ಆಕೆ ತನ್ನ ಮಗುವಿಗೆ ಯಾವಾಗ ಬೆಂಕಿ ಹಚ್ಚಿದ್ದಾಳೆ ಎಂಬ ಅರಿವೇ ಇರಲಿಲ್ಲ. ಮತ್ತು ಮಹಿಳೆ ತನ್ನ ಅಪರಾಧವನ್ನು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆ ಕುರಿತಂತೆ ಆರೋಪಿ ವಿರುದ್ಧ ದೂರು ದಾಖಲಿಸಿದ್ದ ಆಕೆಯ ಅತ್ತೆ, ಮನೆಯಲ್ಲಿ ಮಗು ತುಂಬಾ ಅಳುತ್ತಿತ್ತು ಎಂದು ಗುಡ್ಡಿ ತನ್ನ ಮೊಮ್ಮಗನಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಆರೋಪಿ ಗುಡ್ಡಿಗೆ ಮೂವರು ಪುತ್ರಿಯರಿದ್ದು, ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರ ವಿಚಿತ್ರವಾಗಿ ವರ್ತಿಸಲು ಆರಂಭಿಸಿದಳು. ಬಳಿಕ ಈಗ ಮಗುವನ್ನು ಬೆಂಕಿ ಹಚ್ಚಿ ಕೊಂದಿದ್ದಾಳೆ. ಆಕೆಗೆ ಮಾಂತ್ರಿಕ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಪೊಲೀಸರಿಗೆ ತನಿಖೆಯಲ್ಲಿ ತಿಳಿದುಬಂದಿದೆ.
ಗುಡ್ಡಿಯು ಅತೀಂದ್ರಿಯ ಅಭ್ಯಾಸದಿಂದಾಗಿ ತನ್ನ ಮಗುವನ್ನು ಕೊಂದಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆದ್ರೆ ಈ ಪ್ರಕರಣದಲ್ಲಿ ಮಾಂತ್ರಿಕನು ಭಾಗಿಯಾಗಿದ್ದಾನೆಯೇ ಮತ್ತು ಆಕೆ ಅತೀಂದ್ರಿಯ ಅಭ್ಯಾಸದಿಂದ ಮಗುವನ್ನು ಆಕೆಯೇ ಕೊಂದಿದ್ದಾಳಾ..? ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
An A27-year-old woman has been arrested for allegedly killing her five-month-old baby boy at Singrauli district in Madhya Pradesh.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm