ಬ್ರೇಕಿಂಗ್ ನ್ಯೂಸ್
17-10-25 11:53 am Bangalore Correspondent ಕ್ರೈಂ
ಬೆಂಗಳೂರು, ಅ.16 : ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿಕೊಂಡು ವ್ಯಕ್ತಿಯೊಬ್ಬ ಹಲವಾರು ಮಹಿಳೆಯರ ಜೊತೆಗೆ ದೈಹಿಕ ಸಂಬಂಧ ಇರಿಸಿಕೊಂಡಿದ್ದಲ್ಲದೆ, ಅದರ ಫೋಟೊ, ವಿಡಿಯೋ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದ ಆರೋಪದ ಘಟನೆ ಬಯಲಾಗಿದೆ.
ಈ ಬಗ್ಗೆ ವ್ಯಕ್ತಿಯ ಪತ್ನಿಯೇ ಶಾಕ್ ಆಗಿ ಗಂಡನ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ. 20 ವರ್ಷಗಳ ದಾಂಪತ್ಯದ ಬಳಿಕ ಇತ್ತೀಚೆಗೆ ಪತ್ನಿ ಅನ್ನಪೂರ್ಣರಿಂದ ಅಂತರ ಕಾಯ್ದುಕೊಂಡಿದ್ದ ನಾರಾಯಣ್ ಎಂಬಾತನೇ ಈ ಕೃತ್ಯ ಎಸಗಿದಾತ. ಆರೋಪಿ ನಾರಾಯಣ್ ಮಹಿಳೆಯರೊಂದಿಗಿನ ರಾಸಲೀಲೆಯನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಳ್ಳುತ್ತಿದ್ದು ಈ ವಿಡಿಯೋಗಳು ಇದೀಗ ಪತ್ನಿ ಅನ್ನಪೂರ್ಣ ಕೈಸೇರಿದೆ.
ಬೆಂಗಳೂರಿನ ಇಂದಿರಾನಗರದ ಬಿಎಂ ಕಾವಲ್ ನಲ್ಲಿ ವಾಸವಿದ್ದ ನಾರಾಯಣ್ ತಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ(ಕೆಪಿಸಿಸಿ)ಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ಮಹಿಳೆಯರನ್ನು ಪುಸಲಾಯಿಸಿ ಮಂಚಕ್ಕೆ ಕರೆಯುತ್ತಿದ್ದ. ಪತ್ನಿ ಅನ್ನಪೂರ್ಣ ಪ್ರಶ್ನಿಸಿದಾಗ ಜಗಳವಾಡುತ್ತಿದ್ದ. ಕೆಲ ಮಹಿಳೆಯರ ಜೊತೆಗೆ ನಾರಾಯಣ್ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಪತ್ನಿಗೆ ತಿಳಿದಿತ್ತು. ಪತಿಯ ಮೊಬೈಲ್ ನೋಡಿದ ಅನ್ನಪೂರ್ಣಗೆ ಶಾಕ್ ಆಗಿದ್ದು ಈ ಬಗ್ಗೆ ಪ್ರಶ್ನಿಸಿ ಜಗಳ ಮಾಡಿದ್ದರು. ತನ್ನ ಬಣ್ಣ ಬಯಲಾಗಿದ್ದರಿಂದ ಸಿಟ್ಟಿನಲ್ಲಿ ನಾರಾಯಣ್ ಪತ್ನಿಗೆ ಥಳಿಸಿ ಮನೆಯಿಂದ ಹೊರಹಾಕಿದ್ದ. ಹೀಗಾಗಿ ತನಗೆ ಅನ್ಯಾಯವಾಗಿದ್ದು ನ್ಯಾಯ ಕೊಡಿಸುವಂತೆ ಅನ್ನಪೂರ್ಣ ವಿಡಿಯೋ ಜೊತೆಗೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಬೆಂಗಳೂರು ಪೂರ್ವ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
A shocking case has emerged in Bengaluru where a man allegedly claimed to work with the Karnataka Pradesh Congress Committee (KPCC) and engaged in illicit relationships with several women. He reportedly recorded videos of his encounters and used them to blackmail the victims. The man’s wife, Annapurna, discovered the videos on his phone and lodged a complaint against him.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am