ಬ್ರೇಕಿಂಗ್ ನ್ಯೂಸ್
18-10-25 03:27 pm Mangalore Correspondent ಕ್ರೈಂ
ಬೆಳ್ತಂಗಡಿ, ಅ.18: ಇಲ್ಲಿನ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲೂ ನಕಲಿ ಚಿನ್ನಾಭರಣ ಅಡವಿಟ್ಟು ವಂಚಿಸಿದ ಘಟನೆ ನಡೆದಿದೆ. ಅಬ್ದುಲ್ ರಮೀಜ್ ಎಂಬಾತ ರೂ. 4,75,750 ಸಾಲ ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕ ಪ್ರವೀಣ್ ಕ್ಲಿಫರ್ಡ್ ಪಾಯಸ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉಜಿರೆ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಂಘದ ವ್ಯವಸ್ಥಾಪಕ ಪ್ರವೀಣ್ ಕ್ಲಿಪರ್ಡ್ ಪಾಯಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಅಬ್ದುಲ್ ರಮೀಜ್ ಎಂಬಾತ 2025 ಸೆಪ್ಟೆಂಬರ್ ತಿಂಗಳ 9 ರಂದು ಮತ್ತು ಅಕ್ಟೋಬರ್ ತಿಂಗಳ 8 ರಂದು ಸಹಕಾರ ಸಂಘಕ್ಕೆ ಬಂದು ಕ್ರಮವಾಗಿ 22.900 ಗ್ರಾಂ ಮತ್ತು 33.910 ಗ್ರಾಂ ತೂಕದ ಚಿನ್ನಾಭರಣವೆಂದು ನಂಬಿಸಿ ಚಿನ್ನವನ್ನು ಅಡವಿಟ್ಟು, ಕ್ರಮವಾಗಿ ರೂ. 1,91,000 ರೂ ಮತ್ತು ರೂ. 2,84,750 ರೂ. ಸಾಲ ಪಡೆದಿದ್ದಾನೆ. ಅ.14 ರಂದು ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಅಬ್ದುಲ್ ರಮೀಜ್ ಮಂಗಳೂರಿನ ಇತರೇ ಸಹಕಾರಿ ಸಂಸ್ಥೆಗಳಲ್ಲಿ ನಕಲಿ ಚಿನ್ನಾಭರಣ ಅಡವಿರಿಸಿ ಸಾಲ ಪಡೆದು ಮೋಸ ಮಾಡಿರುವ ವಿಚಾರ ತಿಳಿದುಬಂದಿತ್ತು.
ಇದರಿಂದ ಸಂಶಯಗೊಂಡು ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಆರೋಪಿ ಇಟ್ಟಿದ್ದ ಚಿನ್ನವನ್ನು ಪರಿಶೀಲಿಸಿದಾಗ ನಕಲಿ ಎಂಬುದು ಪತ್ತೆಯಾಗಿತ್ತು. ಒಟ್ಟು 56.810 ಗ್ರಾಂ ತೂಕದ ನಕಲಿ ಚಿನ್ನಾಭರ ಇಟ್ಟಿದ್ದು ರೂ.4,75,750 ಸಾಲ ಪಡೆದಿದ್ದಾನೆ. ಬ್ಯಾಂಕ್ ವ್ಯವಸ್ಥಾಪಕರ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಗಳೂರು ಕಾವೂರಿನ ಆತ್ಮಶಕ್ತಿ ಸಹಕಾರಿ ಸಂಘ ಮತ್ತು ಒಡಿಯೂರು ವಿವಿಧೋದ್ದೇಶ ಸಹಕಾರಿ ಸಂಘದ ಪುತ್ತೂರು ಶಾಖೆಯಲ್ಲಿ ಇದೇ ಅಬ್ದುಲ್ ರಮೀಜ್ ನಕಲಿ ಚಿನ್ನ ಇಟ್ಟು ದೊಡ್ಡ ಮೊತ್ತದ ಸಾಲ ಪಡೆದು ವಂಚನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
The Belthangady branch of Ujire Anugraha Multipurpose Co-operative Society has become the latest victim of a fake gold loan scam involving Abdul Rameez of Puttur. The accused allegedly pledged fake gold ornaments weighing 56.810 grams and obtained a loan of ₹4,75,750 from the society.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am