ಬ್ರೇಕಿಂಗ್ ನ್ಯೂಸ್
21-10-25 10:51 pm Mangalore Correspondent ಕ್ರೈಂ
ಮಂಗಳೂರು, ಅ.21 : ನಮ್ಮಲ್ಲಿ ಹಣ ಹೂಡಿಕೆ ಮಾಡಿದರೆ ಡಬಲ್ ಆಗುತ್ತೆ, ದೊಡ್ಡ ಮಟ್ಟದ ಲಾಭ ಸಿಗುತ್ತದೆ ಎಂದು ನಂಬಿಸಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ಮುಲ್ಕಿ ಪೊಲೀಸರು ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ.
ಕವತ್ತಾರು ನಿವಾಸಿಗಳಾದ ರಿಚರ್ಡ್ ಡಿಸೋಜ (52) ಮತ್ತು ಆತನ ಪತ್ನಿ ರಶ್ಮಿ ರೀಟಾ ಪಿಂಟೋ (47) ಬಂಧಿತರು. ಇನ್ವೆಸ್ಟ್ ಮೆಂಟ್ ಸ್ಕೀಮ್ ಹೆಸರಲ್ಲಿ ಹಲವಾರು ಮಂದಿಯಿಂದ ಕೋಟ್ಯಂತರ ರೂಪಾಯಿ ಹಣ ಮತ್ತು ಒಡವೆಯನ್ನು ಪಡೆದು ವಂಚಿಸಿರುವ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಕಲಿ ಕಂಪನಿ ಹೆಸರಲ್ಲಿ ಇವರು ಜನರನ್ನು ಇನ್ವೆಸ್ಟ್ ಮಾಡುವಂತೆ ಪ್ರೇರೇಪಣೆ ಮಾಡುತ್ತಿದ್ದರು.
ಹಣ ವಂಚನೆ ಮಾಡಿದ ಬಗ್ಗೆ ದಂಪತಿ ವಿರುದ್ಧ 2024ರಲ್ಲಿ ಮತ್ತು 2025ರಲ್ಲಿ ಎರಡು ಎಫ್ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಾದ ಬಳಿಕ ಆರೋಪಿ ದಂಪತಿ ಮುಂಬೈಗೆ ಎಸ್ಕೇಪ್ ಆಗಿ ತಲೆಮರೆಸಿಕೊಂಡಿದ್ದರು. ಮುಲ್ಕಿ ಪೊಲೀಸರು ಬೆನ್ನು ಹತ್ತಿ ಇಬ್ಬರನ್ನೂ ಮುಂಬೈನಲ್ಲಿ ಅರೆಸ್ಟ್ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ರಿಚರ್ಡ್ ಡಿಸೋಜಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವಂಚನೆ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದಂಪತಿಯಿಂದ ಮೋಸಕ್ಕೊಳಗಾದವರು ಇದ್ದರೆ ಬಂದು ದೂರು ನೀಡಿ ಸಾಕ್ಷ್ಯಗಳನ್ನು ನೀಡಬಹುದು ಎಂದು ಮುಲ್ಕಿ ಪೊಲೀಸರು ತಿಳಿಸಿದ್ದಾರೆ.
Mulki police have arrested a couple, Richard D’Souza (52) and his wife Rashmi Rita Pinto (47), for allegedly running a fake investment scheme that duped several people of crores of rupees and gold ornaments. The couple had promised to double investors’ money through a bogus company.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am