ಬ್ರೇಕಿಂಗ್ ನ್ಯೂಸ್
23-10-25 05:20 pm Bangalore Correspondent ಕ್ರೈಂ
ಬೆಂಗಳೂರು, ಅ 23 : ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನೀಲ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಪ್ರಕರಣ ಕೇಳಿಬಂದಿದೆ. ಮಹಿಳೆಯೊಬ್ಬರು ನನ್ನನ್ನು ಮದುವೆಯಾಗುವುದಾಗಿ ನಂಬಿಸಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು ಈ ಸಂಬಂಧ ಡಿಜಿ ಮತ್ತು ಐಜಿಪಿ ಕಚೇರಿಗೂ ದೂರು ನೀಡಿದ್ದಾರೆ.
ಹಣದ ಮೋಸದ ವಿಚಾರಕ್ಕೆ ಠಾಣೆಗೆ ಬಂದಿದ್ದ 36 ವರ್ಷದ ಮಹಿಳೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡ ಸುನೀಲ್ ನಂತರ ಮದುವೆಯಾಗುವುದಾಗಿ ನಂಬಿಸಿದ್ದಾರೆ. ಅಷ್ಟೇ ಅಲ್ಲದೆ ರಿಜಿಸ್ಟರ್ ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ನನಗೆ ಮನೆ ಕೊಡಿಸುತ್ತೇನೆ. ಬ್ಯೂಟಿ ಪಾರ್ಲರ್ ಓಪನ್ ಮಾಡಿಕೊಡುತ್ತೇನೆ ಎಂದು ಹೇಳಿ ನನ್ನನ್ನು ತಮ್ಮ ಮನೆ ಮತ್ತು ಹೋಟೆಲ್ ಗೆ ಕರೆಸಿಕೊಂಡು ಮೂರು ಬಾರಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಆಯೇಷಾ ದೂರು ನೀಡಿದ್ದಾರೆ.


ಈ ಮಧ್ಯೆ, ಆರೋಪರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯ ಹೇಳಿಕೆ ಮತ್ತು ಅವರ ನಡುವೆ ನಡೆದ ಚಾಟಿಂಗ್ ವಿವರಗಳು ಈಗ ಬಹಿರಂಗಗೊಂಡಿದ್ದು ಪ್ರಕರಣಕ್ಕೆ ಮತ್ತಷ್ಟು ತಿರುವು ನೀಡಿವೆ. ಇನ್ಸ್ಪೆಕ್ಟರ್ ಸುನೀಲ್ ಮದುವೆಯಾಗುವುದಾಗಿ ನಂಬಿಸಿ ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಸಂತ್ರಸ್ತೆಯ ದೂರಿನ ಸತ್ಯಾಂಶಗಳನ್ನು ಈ ಚಾಟ್ಗಳು ಬಿಚ್ಚಿಟ್ಟಿವೆ.
ಇನ್ನು ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ನಡೆಸಿರುವ ಆರೋಪವನ್ನು ಮಹಿಳೆ ಮಾಡಿದ್ದಾರೆ. ನಮ್ಮ ವಿಚಾರವನ್ನು ಯಾರಿಗಾದರೂ ಹೇಳಿದರೇ ಕೊಲೆ ಮಾಡೋದಾಗಿ ಬೆದರಿಕೆ ಕೂಡ ಹಾಕಿದ್ದಾರಂತೆ. ಪ್ರತಿ ಭಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಿದ್ದಾರೆ ಎಂದು ಸಂತ್ರಸ್ಥ ಮಹಿಳೆ ಆರೋಪ ಮಾಡಿದ್ದಾರೆ.
ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಸಂತ್ರಸ್ಥೆ ನಡುವೆ ವಾಟ್ಸಾಫ್ ಚಾಟಿಂಗ್ ಕೂಡ ನಡೆದಿದೆ. ತನ್ನ ಮನೆ ಲೊಕೇಷನ್ ಶೇರ್ ಮಾಡಿ ಮನೆಗೆ ಬರುವಂತೆ ಆಹ್ವಾನ…ಕೂಡ ನೀಡಿದ್ದಾರೆ. ಮನೆಯಲ್ಲಿ ಹೆಂಡತಿ , ಮಕ್ಕಳಿಲ್ಲ, ನನ್ನ ಮನೆಗೆ ಬಾ ಎಂದು ಇನ್ಸ್ ಪೆಕ್ಟರ್ ಮೆಸೇಜ್…ಮಾಡಿದ್ದಾರೆ. ಯು ಆರ್ ಲವ್ ಮೈ ಸ್ವೀಟ್ ಹಾರ್ಟ್ ಅಂಥ ಯುವತಿಯಿಂದಲೂ ಮೆಸೇಜ್ ಮಾಡಲಾಗಿದೆ. ಚಿನ್ನಿ, ಮಿಸ್ ಯೂ ಅಂಥ ಸಂತ್ರಸ್ಥೆಯಿಂದಲೂ ಮೆಸೇಜ್…ಮಾಡಲಾಗಿದೆ. ಅದಕ್ಕೆ ಮೀ ಟೂ ಅಂಥ ಇನ್ಸ್ ಪೆಕ್ಟರ್ ರಿಪ್ಲೈ ಮಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಇಬ್ಬರ ನಡುವೆ ಮಾತುಕತೆಯೂ ನಡೆದಿದೆ. ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಸಂತ್ರಸ್ಥ ಮಹಿಳೆಯ ನಡುವಿನ ವಾಟ್ಸಾಫ್ ಚಾಟಿಂಗ್ ಅನ್ನು ಮಹಿಳೆ ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದಾರೆ.
A shocking case has emerged in Bengaluru, where DJ Halli Police Inspector Sunil has been accused of raping and cheating a 36-year-old woman who had come to the police station regarding a financial dispute.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm