ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm