ಬ್ರೇಕಿಂಗ್ ನ್ಯೂಸ್
25-10-25 10:00 pm Bangalore Correspondent ಕ್ರೈಂ
ಬೆಂಗಳೂರು, ಅ.26 : ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳವು ಮಾಡಲಾದ ಚಿನ್ನವನ್ನು ಬಳ್ಳಾರಿಯ ಉದ್ಯಮಿ ರೊದ್ದಂ ಗೋವರ್ಧನ್ ಅವರ ಜುವೆಲ್ಲರಿಗೆ ಮಾರಾಟ ಮಾಡಿರುವುದನ್ನು ಕೇರಳ ಪೊಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ಕೇರಳದ ಎಸ್ಐಟಿ ಪೊಲೀಸರು ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ದಾಳಿ ನಡೆಸಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಬೆಂಗಳೂರಿನ ಶ್ರೀರಾಂಪುರ ವ್ಯಾಪ್ತಿಯಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಅರ್ಚಕ ಪೋಟಿ ಉನ್ನಿಕೃಷ್ಣನ್ ನಿವಾಸ ಹಾಗೂ ಬಳ್ಳಾರಿಯ ರೊದ್ದಂ ಜ್ಯುವೆಲ್ಲರ್ಸ್ ಮೇಲೆ ಕೇರಳ ಪೊಲೀಸರು ದಾಳಿ ನಡೆಸಿದ್ದಾರೆ. ಶಬರಿಮಲೆ ದೇವಾಲಯದ ದ್ವಾರಪಾಲಕ ಮೂರ್ತಿಗಳಿಂದ 475 ಗ್ರಾಂ ಚಿನ್ನದ ಪ್ಲೇಟ್ ಕದ್ದ ಆರೋಪದಡಿ ಪೋಟಿ ಉನ್ನಿಕೃಷ್ಣನ್ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದರು. ಕದ್ದ ಚಿನ್ನವನ್ನು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಅವರಿಗೆ ಮಾರಾಟ ಮಾಡಿದ ಆರೋಪದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉದ್ಯಮಿ ಗೋವರ್ಧನ್ ಅವರ ಒಡೆತನದ ರೊದ್ದಂ ಆಭರಣ ಅಂಗಡಿಯಿಂದ ವಿಶೇಷ ತನಿಖಾ ತಂಡ ಹಲವಾರು ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆದಿದೆ. ಇದೇ ವೇಳೆ, ಪೋಟಿ ಉನ್ನಿಕೃಷ್ಣನ್ ಅವರಿಂದ 476 ಗ್ರಾಂ ಚಿನ್ನ ಖರೀದಿಸಿದ್ದಾಗಿ ಗೋವರ್ಧನ್ ಒಪ್ಪಿಕೊಂಡಿದ್ದಾರೆ.
ಶಬರಿಮಲೆಯಲ್ಲಿ ಕಳ್ಳತನ ಆದ ಚಿನ್ನ ಎನ್ನುವುದು ಗೊತ್ತಿರದ ಕಾರಣ ನಾನು ಚಿನ್ನ ಖರೀದಿ ಮಾಡಿದ್ದೆ. ಕದ್ದಿದ್ದ ಚಿನ್ನ ಎಂದು ಗೊತ್ತಿದ್ದರೆ ಖರೀದಿ ಮಾಡುತ್ತಿರಲಿಲ್ಲ ಎಂದು ಗೋವರ್ಧನ್ ಕೇರಳ ಎಸ್ಐಟಿ ಮುಂದೆ ಹೇಳಿಕೊಂಡಿದ್ದಾರೆ. ಮುಂದೆ ತನಿಖೆಗೆ ಕರೆದಾಗ ಬರಬೇಕಾಗುತ್ತದೆ ಎಂದು ಹೇಳಿ ಅವರನ್ನು ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದಾರೆ.
Kerala Police have uncovered that stolen gold from the Sabarimala Ayyappa Temple was sold to a jeweller in Ballari, Karnataka. Acting on this lead, the Special Investigation Team (SIT) conducted raids in Bengaluru and Ballari, seizing 476 grams of gold and crucial documents.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm