ಬ್ರೇಕಿಂಗ್ ನ್ಯೂಸ್
28-10-25 10:48 pm Mangalore Correspondent ಕ್ರೈಂ
ಬಂಟ್ವಾಳ, ಅ.28 : ಕೇರಳ ಮೂಲದ ನಿವಾಸಿ, ಅರಬ್ ರಾಷ್ಟ್ರದಲ್ಲಿ ಉದ್ಯಮಿಯಾಗಿದ್ದ ಅಶ್ರಫ್ ಎಂಬಾತನ ಹನಿ ಟ್ರ್ಯಾಪ್ ನಡೆಸಿ 45 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳಿಗೆ ಕಡೆಗೂ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಸಹಿತ ಆರು ಜನರ ವಿರುದ್ಧ ವಿಟ್ಲ ಠಾಣೆಯಲ್ಲಿ ಅ.ಕ್ರಂ:145/ 2025ರಂತೆ ಪ್ರಕರಣ ದಾಖಲಾಗಿತ್ತು. ಇದೀಗ ಹನಿ ಟ್ರ್ಯಾಪ್ ಪ್ರಕರಣದ ಪ್ರಮುಖ ಆರೋಪಿಗಳಾದ ಕಡಂಬು ಬಶೀರ್, ಮಾಣಿ ಸೆಫಿಯಾ, ಸರಪುದ್ಧೀನ್ ಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.
ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರವಾಗಿ ವಕೀಲೆ ಚೇತನಾ ಶೆಟ್ಟಿ ದಂಡೆ ವಾದ ಮಂಡಿಸಿದ್ದರು. ಹನಿ ಟ್ರ್ಯಾಪ್ ಸಂತ್ರಸ್ತ ಅಶ್ರಫ್ ಪರವಾಗಿ ಖಾಸಗಿ ವಕೀಲರಿಂದಲೂ ವಾದ ಮಂಡನೆ ಮಾಡಲಾಗಿತ್ತು. ಆದರೆ ಆರೋಪಿಗಳ ಪರ ವಾದ ಪುರಸ್ಕರಿಸಿದ ನ್ಯಾಯಪೀಠ, ಷರತ್ತಿಗೊಳಪಟ್ಟು ನಿರೀಕ್ಷಣಾ ಜಾಮೀನು ನೀಡಿದೆ.
ಆರೋಪಿಗಳ ಬಂಧನಕ್ಕಾಗಿ ಸಂತ್ರಸ್ತ ಅಶ್ರಫ್ ಮತ್ತು ಆತನ ವಕೀಲೆ ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು. ಮಾಣಿ ಸೆಪಿಯಾ ಮತ್ತು ಆಕೆಯ ತಂಡ ಹನಿಟ್ರ್ಯಾಪ್ ಮಾಡುವುದನ್ನೇ ಕಸುಬು ಮಾಡಿಕೊಂಡಿದ್ದು ಕರ್ನಾಟಕ- ಕೇರಳ ಗಡಿಭಾಗದ ಹಲವಾರು ಮಂದಿಯನ್ನು ಬಲೆಗೆ ಕೆಡವಿ ಹಣ ಪೀಕಿದೆ ಎಂದು ಆರೋಪಿಸಿದ್ದರು. ಅಲ್ಲದೆ, ಆರೋಪಿಗಳ ಬಂಧನಕ್ಕಾಗಿ ಆಗ್ರಹಿಸಿದ್ದರು.
In the honey trap case involving extortion of ₹45 lakh from Ashraf, a Kerala native and businessman based in an Arab country, three prime accused have now been granted anticipatory bail.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm