ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm