ಬ್ರೇಕಿಂಗ್ ನ್ಯೂಸ್
29-10-25 02:53 pm Mangalore Correspondent ಕ್ರೈಂ
ಪುತ್ತೂರು, ಅ.29 : ವಿಷನ್ ಇಂಡಿಯಾ ಲಕ್ಕಿ ಸ್ಕೀಂ ಹೆಸರಲ್ಲಿ ದುಬಾರಿ ಗಿಫ್ಟ್ ನೀಡುವುದಾಗಿ ಹೇಳಿ ಜನರನ್ನು ನಂಬಿಸಿ ಹಣ ಸಂಗ್ರಹಿಸುತ್ತಿರುವ ಪ್ರಕರಣ ಪತ್ತೆಹಚ್ಚಿರುವ ಪುತ್ತೂರು ನಗರ ಠಾಣೆ ಪೊಲೀಸರು ಮಂಗಳೂರಿನ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪುತ್ತೂರು ನಗರ ಠಾಣೆಯ ಉಪ ನಿರೀಕ್ಷಕ ಜನಾರ್ದನ ಕೆ.ಎಂ. ಅವರು ಸೋಮವಾರ ಸಂಜೆ 4.30ರ ಹೊತ್ತಿಗೆ ಪುತ್ತೂರು ಪೇಟೆಯಲ್ಲಿ ರೌಂಡ್ಸ್ ನಲ್ಲಿದ್ದಾಗ ಕೋರ್ಟ್ ರಸ್ತೆ ಮತ್ತಿತರ ಕಡೆ ಜನ ಗುಂಪು ಸೇರಿಕೊಂಡು ಲಕ್ಕಿ ಸ್ಕೀಮ್ ಬಗ್ಗೆ ಚರ್ಚಿಸುತ್ತಿರುವುದು ಕಂಡುಬಂತು. ಅವರ ಕೈಯ್ಯಲ್ಲಿ ಲಕ್ಕಿ ಸ್ಟೀಂ ಕುರಿತಾದ ಕರಪತ್ರಗಳಿರುವುದನ್ನು ನೋಡಿ ಪಿಎಸ್ಐ ವಿಚಾರಿಸಿದ್ದಾರೆ. ಒಂದು ಬಾರಿ 23,000 ರೂ. ಹೂಡಿಕೆ ಮಾಡಿದರೆ ಕಾರು, ಚಿನ್ನಾಭರಣ, ನಗದು, ಮೊಬೈಲ್, ಫ್ರೀಜ್, ಗೃಹಪಯೋಗಿ ವಸ್ತುಗಳನ್ನು ನೀಡುವ ಬಗ್ಗೆ ಜನ ಚರ್ಚಿಸುತ್ತಿದ್ದರು. ಕರಪತ್ರ ಪರಿಶೀಲಿಸಿದಾಗ ಅದರಲ್ಲಿ ಸಂಸ್ಥೆಯ ಕಚೇರಿ ವಿಳಾಸ ಇರಲಿಲ್ಲ.
ಈ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಮಂಗಳೂರಿನ ಸಲೀಂ ಮತ್ತು ಅಜೀಜ್ ಎಂಬವರು ವಿಷನ್ ಇಂಡಿಯಾ ಲಕ್ಕಿ ಸ್ಕೀಂ 15ನೇ ತಿಂಗಳ ಡ್ರಾ, ವಿಜೇತರಿಗೆ ಬಂಕರ್ ಬಹುಮಾನ ಎಂದು ಕರಪತ್ರ ಮೂಲಕ ಪ್ರಚಾರ ಮಾಡುತ್ತಿರುವುದು ತಿಳಿಯಿತು. ಅಲ್ಲದೆ, ವಿಜೇತರಿಗೆ ಸೊತ್ತುಗಳನ್ನು ನೀಡಲು ಪುತ್ತೂರಿನ ಮಾರುಕಟ್ಟೆ ರಸ್ತೆಯಲ್ಲಿ ಬಾಡಿಗೆ ಕೋಣೆ ಪಡೆದಿರುವುದು ಗೊತ್ತಾಗಿದೆ.
ಇವರು ನಿಷೇಧಿತ ಸೀಂ ನಡೆಸುತ್ತಿರುವುದು ಶಿಕ್ಷಾರ್ಹ ಅಪರಾಧವಾಗಿದ್ದು ದುಬಾರಿ ಗಿಫ್ಟ್ ಹೆಸರಲ್ಲಿ ಜನರನ್ನು ಯಾಮಾರಿಸುತ್ತಿರುವುದನ್ನು ತಿಳಿದು ವಿಷನ್ ಇಂಡಿಯಾ ಲಕ್ಕಿ ಸ್ಕೀಮ್ ಅಕ್ರಮವಾಗಿ ನಡೆಸುತ್ತಿರುವ ಮಂಗಳೂರಿನ ಅಜೀಜ್ ಮತ್ತು ಸಲಾಂ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
The Puttur City Police have registered a case against two residents of Mangaluru for allegedly running a fake “Vision India Lucky Scheme,” collecting money from the public under the pretext of offering expensive gifts.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am