ಬ್ರೇಕಿಂಗ್ ನ್ಯೂಸ್
29-10-25 10:09 pm Bangalore Correspondent ಕ್ರೈಂ
ಬೆಂಗಳೂರು, ಅ 29 : ವರ್ತೂರು ಮತ್ತು ಬೆಳ್ಳಂದೂರಿನ ಕ್ರೋಮಾ ಶೋ ರೂಮ್ಗೆ ನುಗ್ಗಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸಿಕ್ಕಿಂನ ದಿವಾಸ್ ಕಮಿ (22) ಮತ್ತು ಆತನ ಪ್ರೇಯಸಿ, ನೇಪಾಳದ ಅಸ್ಮಿತಾ(26), ದಿವಾಸ್ ಕಮಿ ಸ್ನೇಹಿತ ಅರೋಹಣ್ ತಾಪಾ (24) ಬಂಧಿತರು.
ಆರೋಪಿಗಳಿಂದ ₹40 ಲಕ್ಷ ಮೌಲ್ಯದ 39 ಮೊಬೈಲ್ಗಳು, ಡಿಜಿಟಲ್ ವಾಚ್ಗಳು, ಚಿನ್ನಾಭರಣ, ಕ್ಯಾಮೆರಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಸ್ವಿಗ್ಗಿ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದರು. ನೇಪಾಳದ ಅಸ್ಮಿತಾ ಅವರಿಗೆ ಮದುವೆಯಾಗಿದ್ದು, ಪತಿಯಿಂದ ದೂರವಾಗಿ ಒಂದು ವರ್ಷದಿಂದ ದಿವಾಸ್ ಕಮಿ ಜತೆಗೆ ಸಹ ಜೀವನ ನಡೆಸುತ್ತಿದ್ದರು. ಅಸ್ಮಿತಾ ಅವರು ಮನೆಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಫುಡ್ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದ ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಕ್ರೋಮಾ ಮೊಬೈಲ್ ಅಂಗಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು. ಬೆಳ್ಳಂದೂರು ಮತ್ತು ವರ್ತೂರಿನಲ್ಲಿರುವ ಕ್ರೋಮಾ ಶೋ ರೂಮ್ಗಳ ಬಗ್ಗೆ ಇತ್ತೀಚೆಗೆ ಮಾಹಿತಿ ಸಂಗ್ರಹಿಸಿದ್ದರು. ಅಕ್ಟೋಬರ್ ಮೊದಲ ವಾರದಲ್ಲಿ ಬೆಳ್ಳಂದೂರಿನ ಕ್ರೋಮಾ ಶೋ ರೂಮ್ ಮತ್ತು ವರ್ತೂರಿನ ಕ್ರೋಮಾ ಶೋ ರೂಮ್ನಲ್ಲಿ ಮೊಬೈಲ್ ಕಳವು ಮಾಡಿ, ತುರ್ತು ನಿರ್ಗಮನ ಬಾಗಿಲು ತೆರೆದು ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು.
ಕಳವು ಮಾಡುತ್ತಿದ್ದ ದುಬಾರಿ ಬೆಲೆಯ ಮೊಬೈಲ್ಗಳನ್ನು ಅಸ್ಮಿತಾಳಿಗೆ ನೀಡುತ್ತಿದ್ದರು ಅಸ್ಮಿತಾ ತನಗೆ ಪರಿಚಯವಿದ್ದವರಿಗೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆ ಮೊಬೈಲ್ ಮಾರಾಟ ಮಾಡಿದ್ದ ಹಣದಲ್ಲಿ ಎಂಟು ಗ್ರಾಂ ಚಿನ್ನ ಖರೀದಿಸಿದ್ದ ದಿವಾಸ್ ಕಮಿ, ಪ್ರೇಯಸಿಗೆ ನೀಡಿದ್ದರು. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ದಿವಾಸ್ ಕಮಿ ತನ್ನ ಪ್ರೇಯಸಿ ಅಸ್ಮಿತಾಗಾಗಿಯೇ ಮೊಬೈಲ್ ಕಳ್ಳತನ ಮಾಡಿದ್ದೆ ಎಂಬುದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.
In a bizarre love-driven crime, a young man stole high-end mobile phones from Croma showrooms in Varthur and Bellandur — all to please his girlfriend. The Varthur Police have arrested the accused along with his lover and an accomplice.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm