ಬ್ರೇಕಿಂಗ್ ನ್ಯೂಸ್
29-10-25 10:09 pm Bangalore Correspondent ಕ್ರೈಂ
ಬೆಂಗಳೂರು, ಅ 29 : ವರ್ತೂರು ಮತ್ತು ಬೆಳ್ಳಂದೂರಿನ ಕ್ರೋಮಾ ಶೋ ರೂಮ್ಗೆ ನುಗ್ಗಿ ದುಬಾರಿ ಬೆಲೆಯ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಗಳನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಸಿಕ್ಕಿಂನ ದಿವಾಸ್ ಕಮಿ (22) ಮತ್ತು ಆತನ ಪ್ರೇಯಸಿ, ನೇಪಾಳದ ಅಸ್ಮಿತಾ(26), ದಿವಾಸ್ ಕಮಿ ಸ್ನೇಹಿತ ಅರೋಹಣ್ ತಾಪಾ (24) ಬಂಧಿತರು.
ಆರೋಪಿಗಳಿಂದ ₹40 ಲಕ್ಷ ಮೌಲ್ಯದ 39 ಮೊಬೈಲ್ಗಳು, ಡಿಜಿಟಲ್ ವಾಚ್ಗಳು, ಚಿನ್ನಾಭರಣ, ಕ್ಯಾಮೆರಾ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಮೂರು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದರು. ಸ್ವಿಗ್ಗಿ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದರು. ನೇಪಾಳದ ಅಸ್ಮಿತಾ ಅವರಿಗೆ ಮದುವೆಯಾಗಿದ್ದು, ಪತಿಯಿಂದ ದೂರವಾಗಿ ಒಂದು ವರ್ಷದಿಂದ ದಿವಾಸ್ ಕಮಿ ಜತೆಗೆ ಸಹ ಜೀವನ ನಡೆಸುತ್ತಿದ್ದರು. ಅಸ್ಮಿತಾ ಅವರು ಮನೆಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಫುಡ್ ಡೆಲಿವರಿ ಹುಡುಗರಾಗಿ ಕೆಲಸ ಮಾಡುತ್ತಿದ್ದ ದಿವಾಸ್ ಕಮಿ ಮತ್ತು ಆರೋಹಣ್ ತಾಪಾ ಕ್ರೋಮಾ ಮೊಬೈಲ್ ಅಂಗಡಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದರು. ಬೆಳ್ಳಂದೂರು ಮತ್ತು ವರ್ತೂರಿನಲ್ಲಿರುವ ಕ್ರೋಮಾ ಶೋ ರೂಮ್ಗಳ ಬಗ್ಗೆ ಇತ್ತೀಚೆಗೆ ಮಾಹಿತಿ ಸಂಗ್ರಹಿಸಿದ್ದರು. ಅಕ್ಟೋಬರ್ ಮೊದಲ ವಾರದಲ್ಲಿ ಬೆಳ್ಳಂದೂರಿನ ಕ್ರೋಮಾ ಶೋ ರೂಮ್ ಮತ್ತು ವರ್ತೂರಿನ ಕ್ರೋಮಾ ಶೋ ರೂಮ್ನಲ್ಲಿ ಮೊಬೈಲ್ ಕಳವು ಮಾಡಿ, ತುರ್ತು ನಿರ್ಗಮನ ಬಾಗಿಲು ತೆರೆದು ಪರಾರಿ ಆಗಿದ್ದರು ಎಂದು ಪೊಲೀಸರು ಹೇಳಿದರು.
ಕಳವು ಮಾಡುತ್ತಿದ್ದ ದುಬಾರಿ ಬೆಲೆಯ ಮೊಬೈಲ್ಗಳನ್ನು ಅಸ್ಮಿತಾಳಿಗೆ ನೀಡುತ್ತಿದ್ದರು ಅಸ್ಮಿತಾ ತನಗೆ ಪರಿಚಯವಿದ್ದವರಿಗೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಳು. ಕೆಲವು ದಿನಗಳ ಹಿಂದೆ ಮೊಬೈಲ್ ಮಾರಾಟ ಮಾಡಿದ್ದ ಹಣದಲ್ಲಿ ಎಂಟು ಗ್ರಾಂ ಚಿನ್ನ ಖರೀದಿಸಿದ್ದ ದಿವಾಸ್ ಕಮಿ, ಪ್ರೇಯಸಿಗೆ ನೀಡಿದ್ದರು. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ದಿವಾಸ್ ಕಮಿ ತನ್ನ ಪ್ರೇಯಸಿ ಅಸ್ಮಿತಾಗಾಗಿಯೇ ಮೊಬೈಲ್ ಕಳ್ಳತನ ಮಾಡಿದ್ದೆ ಎಂಬುದಾಗಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸರು ಹೇಳಿದರು.
In a bizarre love-driven crime, a young man stole high-end mobile phones from Croma showrooms in Varthur and Bellandur — all to please his girlfriend. The Varthur Police have arrested the accused along with his lover and an accomplice.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm