ಬ್ರೇಕಿಂಗ್ ನ್ಯೂಸ್
29-10-25 10:43 pm Mangalore Correspondent ಕ್ರೈಂ
ಮಂಗಳೂರು, ಅ.29 : ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.
ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ. ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.
ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ 24 ಪಾಸ್ ಪೋರ್ಟ್ ಗಳು ಸಿಕ್ಕಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, 4.30 ಲಕ್ಷ ಮೌಲ್ಯದ 43 ಗ್ರಾಮ್ ಬಂಗಾರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಾಗಿದೆ.
ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ, ಸಿಬಂದಿ ನಾಗರತ್ನ, ಪ್ರವೀಣ್, ರಾಘವೇಂದ್ರ, ರಿಯಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm