ಬ್ರೇಕಿಂಗ್ ನ್ಯೂಸ್
29-10-25 10:43 pm Mangalore Correspondent ಕ್ರೈಂ
ಮಂಗಳೂರು, ಅ.29 : ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.
ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ. ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.
ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ 24 ಪಾಸ್ ಪೋರ್ಟ್ ಗಳು ಸಿಕ್ಕಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, 4.30 ಲಕ್ಷ ಮೌಲ್ಯದ 43 ಗ್ರಾಮ್ ಬಂಗಾರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಾಗಿದೆ.
ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ, ಸಿಬಂದಿ ನಾಗರತ್ನ, ಪ್ರವೀಣ್, ರಾಘವೇಂದ್ರ, ರಿಯಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am