ಬ್ರೇಕಿಂಗ್ ನ್ಯೂಸ್
29-10-25 10:43 pm Mangalore Correspondent ಕ್ರೈಂ
ಮಂಗಳೂರು, ಅ.29 : ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ದಂಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಆನೇಕಲ್ ತಾಲೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೇರೊ(42) ಬಂಧಿತರು. ಇವರು ಪ್ರೀತಿಸಿ ಮದುವೆಯಾಗಿದ್ದು ಬೆಂಗಳೂರಿನ ಆನೆಕಲ್ ನಲ್ಲಿಯೇ ನೆಲೆಸಿದ್ದರು. ಆನ್ಲೈನ್ ಮತ್ತು ಒಬ್ಬರಿಂದ ಒಬ್ಬರಿಗೆ ಪರಿಚಯವಾಗಿ ವಿದೇಶದಲ್ಲಿ ಕೆಲಸ ಮಾಡಿಸಿಕೊಡುತ್ತಾರೆಂಬ ನಂಬಿಕೆಯಲ್ಲಿ ನೂರಾರು ಮಂದಿ ಹಣ ಕೊಟ್ಟು ಮೋಸ ಹೋಗಿದ್ದಾರೆ.
ಪ್ರತಿ ವ್ಯಕ್ತಿಯಿಂದಲೂ 3ರಿಂದ 4 ಲಕ್ಷ ರೂಪಾಯಿ ಹಣ ಪಡೆದಿದ್ದು, ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪಗಳಿವೆ. ಕಾವೂರು ಠಾಣೆಯಲ್ಲಿ 30ಕ್ಕೂ ಹೆಚ್ಚು ಮಂದಿ ದೂರು ನೀಡಿದ್ದು, ಇದರಂತೆ ಎಫ್ಐಆರ್ ದಾಖಲಾಗಿದೆ. ಹಣ ಕಳಕೊಂಡವರು ಹೆಚ್ಚಿನವರು ಕ್ರಿಶ್ಚಿಯನ್ನರೇ ಆಗಿದ್ದು, ಇಂಗ್ಲೆಂಡ್ ಸೇರಿದಂತೆ ಯುರೋಪ್ ರಾಷ್ಟ್ರಗಳಲ್ಲಿ ಉದ್ಯೋಗ ಸಿಗುತ್ತದೆ ಎಂಬ ನಂಬಿಕೆಯಲ್ಲಿ ಹಣ ಕಟ್ಟಿದ್ದರು.
ಬೆಂಗಳೂರಿನ ಆನೆಕಲ್ ನಲ್ಲಿ ಪಬ್ಲಿಕ್ ಸ್ಕೂಲ್ ಎಂಬ ಹೆಸರಲ್ಲಿ ಇವರು ಶಾಲೆ ನಡೆಸಿಕೊಂಡಿದ್ದಾರೆ. ಇವರ ಮನೆಗೆ ಪೊಲೀಸರು ದಾಳಿ ನಡೆಸಿದ ಸಂದರ್ಭದಲ್ಲಿ 24 ಪಾಸ್ ಪೋರ್ಟ್ ಗಳು ಸಿಕ್ಕಿದ್ದು, ಅವನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, 4.30 ಲಕ್ಷ ಮೌಲ್ಯದ 43 ಗ್ರಾಮ್ ಬಂಗಾರವನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರನ್ನೂ ಬೆಂಗಳೂರಿನಲ್ಲಿ ಬಂಧಿಸಿ ಮಂಗಳೂರಿಗೆ ಕರೆತರಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿ ಪಡೆಯಲಾಗಿದೆ.
ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಮಾರ್ಗದರ್ಶನದಲ್ಲಿ ಕಾವೂರು ಠಾಣೆ ಇನ್ಸ್ ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಐ ಮಲ್ಲಿಕಾರ್ಜುನ ಬಿರಾದಾರ, ಸಿಬಂದಿ ನಾಗರತ್ನ, ಪ್ರವೀಣ್, ರಾಘವೇಂದ್ರ, ರಿಯಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm