ಬ್ರೇಕಿಂಗ್ ನ್ಯೂಸ್
28-12-20 06:27 pm Headline Karnataka News Network ಕ್ರೈಂ
ಕಾರವಾರ, ಡಿ.28: ಬೇರೊಬ್ಬನ ಜೊತೆ ಮದುವೆಯಾಗುತ್ತಾಳೆಂದು ಮಗಳನ್ನು ತಾಯಿಯೇ ಅಪಹರಣ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶಿರಸಿಯ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ತಾಯಿ, ಮಗಳನ್ನು ಪತ್ತೆ ಹಚ್ಚಿದ್ದಾರೆ.
ಡಿಸೆಂಬರ್ 25ರಂದು ಶಿರಸಿಯ ಬಸವೇಶ್ವರ ನಗರದಿಂದ ಋತಿಕಾ (18) ಎಂಬ ಯುವತಿಯ ಅಪಹರಣ ನಡೆದಿತ್ತು. ಋತಿಕಾ ತಾಯಿ ರೂಪಾ ಸಿರ್ಸಿಕರ್, ಕಿರಣ ಬೆಲ್ಲದ್ ಹಾಗೂ ಇತರ ನಾಲ್ಕೈದು ಜನ ಸೇರಿ ಅಪಹರಿಸಿದ್ದರು.
ಋತಿಕಾ ಪತಿ ಮಣಿಕಂಠ ಕೊಡಿಯಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು. ಶಿರಸಿ ಡಿಎಸ್ಪಿ, ಪಿಎಸ್ಐ ನಾಗಪ್ಪ ಬಿ. ನೇತೃತ್ವದ ತಂಡವನ್ನು ರಚನೆ ಮಾಡಿದ್ದರು. ಪೊಲೀಸರು ಅಪಹರಣಕ್ಕೆ ಒಳಗಾದ ಮಗಳು, ಅಪಹರಣ ಮಾಡಿದ್ದ ತಾಯಿಯನ್ನು ಪತ್ತೆ ಹಚ್ಚಿದ್ದಾರೆ.
ಅಪಹರಣಗೊಂಡಿದ್ದ ಋತಿಕಾ ಠಾಣೆಗೆ ಹಾಜರಾಗಿ ಆಪ್ತ ಸ್ನೇಹಿತನಾಗಿದ್ದ ಮಣಿಕಂಠ ಕೋಡಿಯಾನೊಂದಿಗೆ ವಿವಾಹವಾಗಿದೆ. ವಿಷಯವನ್ನು ಕೆಲವು ದಿನ ಕಳೆದರೂ ತನ್ನ ಮನೆಯಲ್ಲಿ ತಿಳಿಸಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ವಿಷಯವನ್ನು ತಾಯಿಗೆ ತಿಳಿಸಿ ಬಸವೇಶ್ವರ ನಗರದ ಮಣಿಕಂಠ ಕೊಡಿಯಾನ ಮನೆಗೆ ಅವರನ್ನು ಕರೆಯಿಸಿಕೊಂಡು ತಾನು ಸ್ವ ಇಚ್ಚೆಯಿಂದ ಅವರ ಜೊತೆ ಹೋಗಿದ್ದೇನೆ ಎಂದು ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದಾಳೆ.
ಅಲ್ಲದೆ, ಪೆಪ್ಪರ್ ಸ್ಪ್ರೇ ಸಿಂಪಡಿಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿ ನನ್ನನ್ನು ಯಾರು ಅಪಹರಿಸಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾಳೆ. ಇದರಿಂದಾಗಿ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ತಾಯಿಯೇ ಮಗಳನ್ನು ಅಪಹರಿಸಿದ್ದರು. ಆದರೆ, ಈಗ ಮಗಳೇ ತನ್ನ ಸ್ವ ಇಚ್ಛೆಯಿಂದ ಯುವಕನ ಜೊತೆಗೆ ಹೋಗುತ್ತಿರುವುದಾಗಿ ಹೇಳಿದ್ದರಿಂದ ಪೊಲೀಸರು ಬಿಟ್ಟು ಕಳಿಸಿದ್ದಾರೆ.
In a shocking incident, an 18-year-old girl was kidnapped by her Mother in Sirsi. The Siri police have succeeded in solving the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am