ಬ್ರೇಕಿಂಗ್ ನ್ಯೂಸ್
01-11-25 07:25 pm HK News Desk ಕ್ರೈಂ
ತಿರುವನಂತಪುರಂ, ನ.1 : ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ನಾಪತ್ತೆ ಪ್ರಕರಣ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೇಗುಲದ ಮಾಜಿ ಕಾರ್ಯ ನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್ ಅವರನ್ನು ಬಂಧಿಸಿದೆ. ದೇವಾಲಯದ ವಿಗ್ರಹಗಳಿಗೆ ಚಿನ್ನ ಲೇಪನದಲ್ಲಿ ಪಿತೂರಿ ನಡೆಸಿದ್ದಾರೆಂಬ ಆರೋಪದಲ್ಲಿ ಎಸ್ಐಟಿ ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೇರಿದೆ.
ತನಿಖಾ ತಂಡದ ಪ್ರಕಾರ, ಸುಧೀಶ್ ದೇವಾಲಯದ ಫಲಕಗಳನ್ನು ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿಗೆ ಹಸ್ತಾಂತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ವೇಳೆ, ಮೂಲ ಚಿನ್ನ ಲೇಪಿತ ಫಲಕಗಳನ್ನು ತಾಮ್ರ ಫಲಕಗಳೆಂದು ತಪ್ಪಾಗಿ ನಿರೂಪಿಸಲಾಗಿದೆ. ಸುಧೀಶ್ ಮತ್ತು ಇತರ ಆರೋಪಿಗಳು ಸೇರಿಕೊಂಡು ಫಲಕಗಳನ್ನು ತಾಮ್ರ ಲೇಪಿತ ಎಂದು ಉಲ್ಲೇಖಿಸಿ ಶಿಫಾರಸು ಪತ್ರವನ್ನು ಬರೆದಿದ್ದಾರೆ.
1998-99ಕ್ಕೂ ಹಿಂದಿನ ಗರ್ಭಗುಡಿ ಮತ್ತು ಇತರ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡಿದ ಸಮಯದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿಯ ಪ್ರಧಾನ ಕಚೇರಿಯಿಂದ ತನಿಖಾ ತಂಡ ದಾಖಲೆಗಳನ್ನು ಸಂಗ್ರಹಿಸಿದೆ. ಕಾಣೆಯಾದ ಚಿನ್ನ ಎಷ್ಟು ಎಂಬುದನ್ನು ನಿರ್ಧರಿಸಲು ಈ ದಾಖಲೆಗಳನ್ನು ತಾಳೆ ಹಾಕಿ ನೋಡಲಾಗುತ್ತದೆ.
ಇದೇ ವೇಳೆ, ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಕಸ್ಟಡಿಯಲ್ಲಿದ್ದ ದೇವಸ್ವಂ ಮಾಜಿ ಆಡಳಿತ ಅಧಿಕಾರಿ ಮುರಾರಿ ಬಾಬು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನವೆಂಬರ್ 13ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
The Special Investigation Team (SIT) probing the Sabarimala Ayyappa Temple gold theft case has arrested former Executive Officer (CEO) Sudheesh Kumar in connection with the disappearance of gold used for plating temple idols and structures. With his arrest, the total number of accused taken into custody has risen to three, officials confirmed.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
26-03-26 09:28 am
HK News Staffer
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am