ಬ್ರೇಕಿಂಗ್ ನ್ಯೂಸ್
05-11-25 05:27 pm Bangalore Correspondent ಕ್ರೈಂ
ಬೆಂಗಳೂರು, ನ.5 : ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕೋಟ್ಯಂತರ ರೂಪಾಯಿ ಹಣವನ್ನು ದುರ್ಬಳಕೆ ಮಾಡಿದ ಪ್ರಕರಣದಲ್ಲಿ ಸೊಸೈಟಿ ಸಿಇಓ ಸೇರಿ ಇಬ್ಬರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೊಸೈಟಿ ಸಿಇಓ ಗೋಪಿನಾಥ್ ಹಾಗೂ ಅಕೌಂಟ್ ಸಿಬ್ಬಂದಿ ಲಕ್ಷ್ಮಿ ಜಗದೀಶ್ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ, ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಇಪಿಎಫ್ಒ ನೌಕರರೇ ಸೇರಿ 61 ವರ್ಷಗಳ ಹಿಂದೆ ಇಪಿಎಫ್ಒ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ರಚಿಸಿಕೊಂಡಿದ್ದರು. ಇಪಿಎಫ್ಒ ನೌಕರರಿಗೆ ಮಾತ್ರವೇ ಸೊಸೈಟಿಯಲ್ಲಿ ಹೂಡಿಕೆಗೆ ಅವಕಾಶ ನೀಡಲಾಗಿತ್ತು. ನೂರಾರು ಜನ ನೌಕರರು ತಮ್ಮ ಉಳಿತಾಯದ ಹಣವನ್ನು ಸೊಸೈಟಿಯಲ್ಲಿ ಹೂಡಿಕೆ ಮಾಡಿದ್ದರು. ಆ ಹಣವನ್ನು ಅವಶ್ಯಕತೆ ಇರುವ ನೌಕರರಿಗೆ ಸಾಲದ ರೂಪದಲ್ಲಿ ನೀಡುತ್ತಿದ್ದ ಸೊಸೈಟಿ, ಹೂಡಿಕೆ ಮಾಡಿದ್ದವರ ಖಾತೆಗಳಿಗೆ ಪ್ರತಿ ತಿಂಗಳು ಬಡ್ಡಿಯ ಹಣವನ್ನೂ ಸಂದಾಯ ಮಾಡುತ್ತಿತ್ತು. ಆದರೆ, 3 ತಿಂಗಳಿನಿಂದ ಬಡ್ಡಿಯ ಹಣ ಖಾತೆಗೆ ಸಂದಾಯವಾಗದಿದ್ದಾಗ ಹೂಡಿಕೆದಾರರು ತೆರಳಿ ಸೊಸೈಟಿಯ ಖಾತೆಯನ್ನು ಪರಿಶೀಲಿಸಿದ್ದರು. ಆಗ ಕೇವಲ 3 ಕೋಟಿ ರೂ. ಮಾತ್ರವೇ ಸಾಲ ನೀಡಲಾಗಿದ್ದು, ಉಳಿದ ಹಣ ಸೊಸೈಟಿಯ ಖಾತೆಯಿಂದ ಖಾಲಿಯಾಗಿರುವುದು ಪತ್ತೆಯಾಗಿತ್ತು.
ಹೂಡಿಕೆಯ ಹಣವನ್ನು ಸೊಸೈಟಿಯ ಖಾತೆಯಿಂದ ಅನಧಿಕೃತವಾಗಿ ಇತರ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಹೂಡಿಕೆದಾರರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಸೊಸೈಟಿ ಸಿಇಓ ಮತ್ತು ಸಿಬಂದಿ ಕೈವಾಡ ಕಂಡುಬಂದಿದ್ದು ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸೊಸೈಟಿಯ ಸಿಇಒ ಗೋಪಿನಾಥ್, ಸಿಬ್ಬಂದಿಯಾದ ಜಗದೀಶ್, ಲಕ್ಷ್ಮೀ, ಲಿಂಗೇಗೌಡ ಹಾಗೂ ರಾಮಾನುಜ ಎಂಬವರ ಮನೆಗಳ ಮೇಲೆ ದಾಳಿ ನಡೆಸಿರುವ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. 300ಕ್ಕೂ ಅಧಿಕ ಠೇವಣಿದಾರರು ಹೂಡಿಕೆ ಮಾಡಿದ್ದ ಸುಮಾರು 70 ಕೋಟಿ ರೂ. ಹಣವನ್ನ ದುರ್ಬಳಕೆ ಮಾಡಿಕೊಂಡ ಆರೋಪ ಕೇಳಿಬಂದಿದೆ. ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆರ್.ಆರ್. ನಗರ, ಜೆ.ಪಿ.ನಗರ, ಅಂಜನಾಪುರದಲ್ಲಿರುವ ಆರೋಪಿತರ ನಿವಾಸಗಳು, ರಿಚ್ಮಂಡ್ ಸರ್ಕಲ್ನಲ್ಲಿರುವ ಸೊಸೈಟಿಯಲ್ಲಿ ತಪಾಸಣೆ ನಡೆಸಲಾಗುತ್ತಿದೆ. ದಾಳಿ ವೇಳೆ ಚಿನ್ನಾಭರಣ, ನಗದು ಮತ್ತು ಹೂಡಿಕೆಗೆ ಸಂಬಂಧಿಸಿದ ಕೆಲ ದಾಖಲೆಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಸೊಸೈಟಿಯ ಸಿಇಓ ಹಾಗೂ ಅಕೌಂಟೆಂಟ್ಗೆ ಸಂಬಂಧಿಸಿದ ವ್ಯಕ್ತಿಯನ್ನ ಬಂಧಿಸಲಾಗಿದೆ. ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಪರಿಶೀಲನೆ ನಡೆಸಿ ದಾಖಲೆಗಳನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಆರೋಪಿಗಳ ಆರ್ಥಿಕ ಸ್ಥಿತಿಗತಿ, ಆಸ್ತಿ ವಿವರಗಳು ಹಾಗೂ ಅವರ ಆದಾಯವನ್ನ ಪರಿಶೀಲಿಸಿದಾಗ ಒಂದಕ್ಕೊಂದು ಹೊಂದಾಣಿಕೆಯಾಗುತ್ತಿಲ್ಲ. ಆರೋಪಿತರು ಹೊಂದಿರುವ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನ ವಶಪಡಿಸಿಕೊಂಡು ಪರಿಶೀಲನೆ ಮಾಡಲಾಗುತ್ತಿದೆ. ಎಷ್ಟು ಹಣ ವಂಚನೆಯಾಗಿದೆ ಮತ್ತು ಹಣ ಯಾವುದಕ್ಕೆಲ್ಲ ದುರ್ಬಳಕೆಯಾಗಿದೆ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ತಿಳಿಸಿದ್ದಾರೆ.
A major financial scam has come to light in the EPFO Credit Co-operative Society in Bengaluru, where employees allegedly embezzled nearly ₹70 crore collected from staff savings over the past 60 years.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm